ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಸೂಪರ್ ಹಿಟ್ ಆಗಿದ್ದು, ಸದ್ಯ ಎಲ್ಲೆಡೆ ಸಕ್ಸಸ್ ಫುಲ್ ಪ್ರದರ್ಶನ ಕಾಣ್ತಿದೆ. ತರುಣ್ ಸುಧೀರ್ ನಿರ್ದೇಶನದ ಈ ಸಿನಿಮಾ ಬಾಕ್ಸ್ ಆಫಿಸ್ ನಲ್ಲೂ ಉತ್ತಮ ಕಲೆಕ್ಷನ್ ಮಾಡಿದ್ದು, ಇನ್ನೇನು ನೂರು ಕೋಟಿಗೆ ಸನಿಹದಲ್ಲಿದೆ. ಸಿನಿಮಾ ಹೀಗೆ ಅದ್ಭುತ ಯಶಸ್ಸು ಕಂಡಿರುವ ಹಿನ್ನೆಲೆಯಲ್ಲಿ ಇಡೀ ಚಿತ್ರತಂಡ ಇದೇ ತಿಂಗಳ ೨೯ ರಿಂದ ಏಪ್ರಿಲ್ 1 ರವರೆಗೂ ಕರ್ನಾಟಕದಾದ್ಯಂತ ವಿಜಯಯಾತ್ರೆ ನಡೆಸಿ ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಲು ಪ್ಲಾನ್ ಮಾಡಿಕೊಂಡಿತ್ತು.
ಆದ್ರೆ ಸದ್ಯ ಕೊರೋನಾ ಎರಡನೇ ಅಲೆಯ ಭೀತಿ ಇರುವುದರಿಂದ ಎಲ್ಲಾ ಜಿಲ್ಲೆಗಳಿಗೂ ಹೋಗಲು ಅಲ್ಲಿ ಚಿತ್ರತಂಡಕ್ಕೆ ಅನುಮತಿ ಸಿಗುವುದು ಕಷ್ಟವಾಗಿದೆ. ಹಾಗಾಗಿ ರಾಬರ್ಟ್ ಚಿತ್ರದ ವಿಜಯಯಾತ್ರೆಯನ್ನು ಚಿತ್ರತಂಡ ರದ್ದುಗೊಳಿಸಿದೆ.
ಈ ಬಗ್ಗೆ ಸ್ವತಃ ಚಿತ್ರದ ನಾಯಕ ದರ್ಶನ್ ಅವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ.ನಿಮ್ಮ ಆರೋಗ್ಯವೇ ನಮ್ಮ ಹಾಗೂ ಸರ್ಕಾರದ ಮೊದಲ ಆದ್ಯತೆ.ದಯಮಾಡಿ ಮಾಸ್ಕ್ ಧರಿಸಿ ಜಾಗೃತೆಯಲ್ಲಿರಿ ಎಂದಿರುವ ನಟ ದರ್ಶನ್, ಈಗಿನ ಪರಿಸ್ಥಿತಿ ಸುಧಾರಿಸುತ್ತಿದ್ದಂತೆ ನಾವು ಖಂಡಿತ ನಿಮ್ಮ ಊರಿಗೆ ಆಗಮಿಸುತ್ತೇವೆ.ನಿಮ್ಮ ಪ್ರೀತಿ ವಿಶ್ವಾಸ ಹೀಗೆ ಇರಲಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಯುವತಿ ನನ್ನ ಭೇಟಿಗೆ ಯತ್ನಿಸಿರಬಹುದು, ಆದರೆ ನಾವು ಭೇಟಿ ಮಾಡಿಲ್ಲ: ಡಿ.ಕೆ. ಶಿವಕುಮಾರ್