ಯಳಂದೂರು ತಾಲ್ಲೂಕಿನ ಕೆ. ದೇವರಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆ ಜಿಲ್ಲಾಡಳಿತ ಚಾಮರಾಜನಗರ ವತಿಯಿಂದ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ “ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು….
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಗ್ರಾಮಸ್ಥರು ವಿವಿಧ ಕಲಾ ತಂಡಗಳೊಂದಿಗೆ ಬರಮಾಡಿಕೊಂಡರು….
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳಾದ ಡಿ. ಎಸ್.ರಮೇಶ್ ರವರು ಉದ್ಘಾಟನೆ ಮಾಡಿದರು…
ನಂತರ ಪ್ರಾಸ್ತವಿಕ ನುಡಿಯನ್ನು ತಹಸೀಲ್ದಾರ್ ಆನಂದಪ್ಪನಾಯಕ ರವರು ಮಾತನಾಡಿ ಸಾರ್ವಜನಿಕರ ಕುಂದುಕೊರತೆಯನ್ನು ಆಲಿಸಿ ನಿವಾರಿಸಲು ಗ್ರಾಮ ವಾಸ್ತವ್ಯ ಮಾಡಲಾಗಿದೆ ಎಲ್ಲಾರು ಸದ್ಭಳಕೆ ಮಾಡಿಕೊಳ್ಳಿ ಎಂದರು….
ಜಿಲ್ಲಾಧಿಕಾರಿಗಳು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ಸಮಸ್ಯೆಯನ್ನು ಆಲಿಸಿದರು. ನಂತರ ಇಲಾಖೆ ಅಧಿಕಾರಿಗಳಿಗೆ ಬಗೆಹರಿಸುವಂತೆ ತಿಳಿಸಿದರು……
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details……