ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ ನಾಳೆ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ…ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ಹೆಲಿಪ್ಯಾಡ್ಗೆ ಹೆಲಿಕಾಪ್ಟರ್ ಮೂಲಕ ಆಗಮಿಸುವವರು. ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳುವವರು…ಮಧ್ಯಾಹ್ನ 12.50 ಗಂಟೆಗೆ ಹನೂರು ಪಟ್ಟಣದ ರಾಮಾಪುರ ರಸ್ತೆಯಲ್ಲಿರುವ ಹೆಲಿಪ್ಯಾಡ್ಗೆ ಹೆಲಿಕಾಪ್ಟರ್ ಮೂಲಕ ಆಗಮಿಸುವವರು. ಬಳಿಕ ಹನೂರಿನ ಮಹದೇಶ್ವರ ಕ್ರೀಡಾಂಗಣದಲ್ಲಿ ಹನೂರು ಮತ್ತು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳುವವರು…ನಂತರ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್ಗೆ ಹೆಲಿಕಾಪ್ಟರ್ ಮೂಲಕ ಆಗಮಿಸುವವರು. ಬಳಿಕ ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವವರು. ಮಧ್ಯಾಹ್ನ 3.15 ಗಂಟೆಗೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಪಾಲ್ಗೊಳುವವರು…
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada