ಚಂಡೀಗಢ: ಪ್ರಮುಖ ಭದ್ರತಾ ಉಲ್ಲಂಘನೆಯ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ನ ಫಿರೋಜ್ಪುರಕ್ಕೆ ತಮ್ಮ ನಿಗದಿತ ಭೇಟಿಯನ್ನು ಬುಧವಾರ ರದ್ದುಗೊಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಫಿರೋಜ್ಪುರಕ್ಕೆ ಭೇಟಿ ನೀಡಿ ಹಲವಾರು ಅಭಿವೃದ್ದಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲು ಹಾಗೂ ಈ ವೇಳೆ ಜನತೆಯನ್ನುದ್ದೇಶಿಸಿ ಭಾಷಣ ಮಾಡಲು ತೀರ್ಮಾನಿಸಲಾಗಿತ್ತು.
ಇಂದು ಪ್ರಧಾನಿಯವರು ಬಟಿಂಡಾಕ್ಕೆ ಬಂದಿಳಿದಿದ್ದರು. ಭಾರತ-ಪಾಕಿಸ್ತಾನ ಗಡಿಯಲ್ಲಿರುವ ಫಿರೋಜ್ಪುರ ಜಿಲ್ಲೆಯತ್ತ ತೆರಳಿದ್ದರು.
ಬುಧವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಟಿಂಡಾಕ್ಕೆ ಬಂದಿಳಿದಿದ್ದರು. ಅಲ್ಲಿಂದ ಅವರು ಹೆಲಿಕಾಪ್ಟರ್ ಮೂಲಕ ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ತೆರಳಬೇಕಾಗಿತ್ತು. ಸುಧಾರಿತ ಹವಾಮಾನ ಇಲ್ಲದ ಕಾರಣ, ಅವರು ರಸ್ತೆ ಮೂಲಕ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ತೀರ್ಮಾನಿಸಲಾಯಿತು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada