ಚಂದ್ರಶೇಖರ್‌ ಗುರೂಜಿ ಹಂತಕರು 4 ಗಂಟೆಯಲ್ಲೇ ಅರೆಸ್ಟ್!‌

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಅವರನ್ನು ಭೀಕರವಾಗಿ ಹತ್ಯೆಗೈದ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಘಟನೆ ನಡೆದ 4 ಗಂಟೆಯಲ್ಲೇ ಬಂಧಿಸಿದ್ದಾರೆ.

ಹುಬ್ಬಳ್ಳಿಯ ಉಣಕಲ್‌ ಬಳಿಯ ಖಾಸಗಿ ಹೋಟೆಲ್‌ ನಲ್ಲಿ ಮಂಗಳವಾರ ಮಧ್ಯಾಹ್ನ 12.30ರ ಸುಮಾರಿಗೆ ಇಬ್ಬರು ಹಂತಕರು ಚಾಕುವಿನಿಂದ ಇರಿದು ಪರಾರಿಯಾಗಿದ್ದರು.

ಘಟನೆ ನಡೆದ ಬೆನ್ನಲ್ಲೇ ಪೊಲೀಸರು ಆರೋಪಿಗಳ ಪತ್ತೆಗೆ 5 ತಂಡ ರಚಿಸಲಾಗಿದ್ದು, ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಹುಬ್ಬಳ್ಳಿ- ಬೆಳಗಾವಿ ಮಧ್ಯೆ ಇದ್ದ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಂದ್ರಶೇಖರ್‌ ಅವರ ಆಪ್ತರು ಎನ್ನಲಾದ ಮಹಂತೇಶ್‌ ಶಿರೂರು ಮತ್ತು ಮಂಜುನಾಥ್‌ ಎಂಬುವವರು ಕೊಲೆ ಮಾಡಿ ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬೇನಾಮಿ ಆಸ್ತಿ ವಿಷಯದಲ್ಲಿ ಚಂದ್ರಶೇಖರ್‌ ಅವರನ್ನು ಹತ್ಯೆಗೈಯ್ಯಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿ ಪ್ರಕರಣದ ಬೆನ್ನು ಬಿದ್ದಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತ-ಇಂಗ್ಲೆಂಡ್ 5ನೇ ಟೆಸ್ಟ್ ನಲ್ಲಿ ಇಂಗ್ಲೆಂಡ್ ಗೆ ಭರ್ಜರಿ ಗೆಲುವು !

Tue Jul 5 , 2022
ಕೆಎನ್‌ಎನ್ ಸ್ಪೋರ್ಟ್ಸ್ ಡೆಸ್ಕ್: ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ನಲ್ಲಿ ಮಂಗಳವಾರ ನಡೆದ 5ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 7 ವಿಕೆಟ್ಗಳಿಂದ ಭಾರತವನ್ನು ಸೋಲಿಸಿದೆ. ಈ ಮೂಲಕ ಭಾರತ-ಇಂಗ್ಲೆಂಡ್ 5ನೇ ಟೆಸ್ಟ್ ನ 5ನೇ ದಿನ ಪಂದ್ಯದಲ್ಲಿ ರೂಟ್, ಬೈರ್ಸ್ಟೋವ್ ಸಾರಥ್ಯದಲ್ಲಿ ಇಂಗ್ಲೆಂಡ್ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ನಾಲ್ಕನೇ ವಿಕೆಟ್ಗೆ ಜೋ ರೂಟ್ ಮತ್ತು ಜಾನಿ ಬೈರ್ತ್ಸೋವ್ ಅವರ ಮುರಿಯದ 269 ರನ್ಗಳ ಜೊತೆಯಾಟವು ಆತಿಥೇಯರಿಗೆ ನಾಲ್ಕನೇ ಇನ್ನಿಂಗ್ಸ್ನಲ್ಲಿ 378 […]

Advertisement

Wordpress Social Share Plugin powered by Ultimatelysocial