ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಅವರಿಗೆ ಹಂತಕರು ಒಟ್ಟು 42 ಕಡೆಗಳಲ್ಲಿ ಇರಿದ ಗಾಯಗಳಿವೆ ಎಂದು ಮರಣೋತ್ತರ ಪರೀಕ್ಷೆ ವರದಿ ತಿಳಿಸಿದೆ.
ವಿಧಿ ವಿಜ್ಞಾನ ವಿಭಾಗದ ಡಾ. ಸುನಿಲ ಬಿರಾದಾರ ಮರಣೋತ್ತರ ಪರೀಕ್ಷೆ ವಿವರಗಳನ್ನು ಮಾಧ್ಯಮಗಳಿಗೆ ನೀಡಿದ್ದು, ಕುತ್ತಿಗೆ ಬಳಿ 2 ಬಾರಿ 12 ಇಂಚಿನಷ್ಟು ಕೊಯ್ದಿದ್ದು, ಚಾಕು 2-3 ಇಂಚಿನಷ್ಟು ಒಳಗೆ ಹೋಗಿ ಗಾಯವುಂಟಾಗಿದ್ದು, ಇರಿದ ಜಾಗದಲ್ಲೇ 2-3 ಬಾರಿ ಇರಿದಿದ್ದಾರೆ ಎಂದು ತಿಳಿಸಿದ್ದಾರೆ.
ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಗುರೂಜಿಯವರ ಮರಣೋತ್ತರ ಪರೀಕ್ಷೆ ಮುಕ್ತಾಯಗೊಡಿದ್ದು ಶವವನ್ನು ಅವರ ಸಂಬಂಧಿಕರಿಗೆ ಹಸ್ತಾಂತರ ಮಾಡಲಾಯಿತು.
ಸುರಿಯುವ ಮಳೆಯ ನಡುವೆಯೇ ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಶವವನ್ನು ಮೆರವಣಿಗೆ ಮೂಲಕ ಸಾಗಿಸಲಾಯಿತು.
ಶವಗಾರದಿಂದ ಅಂತ್ಯಕ್ರಿಯೆ ಸಾಗಿಸುವ ವಾಹನಕ್ಕೆ ಶವವನ್ನು ಸಾಗಿಸುವಾಗ ಸಿಬ್ಬಂದಿ ಹಾಗೂ ಸಂಬಂಧಿಗಳು ಕಣ್ಣೀರು ಹಾಕಿದರು. ಸುಳ್ಳ ರಸ್ತೆಯ ಅಂತ್ಯಕ್ರಿಯೆ ಜಾಗದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada