ಚಂದ್ರಶೇಖರ ಗುರೂಜಿ ಅವರಿಗೆ ಹಂತಕರು ಒಟ್ಟು 42 ಕಡೆಗಳಲ್ಲಿ ಇರಿದ ಗಾಯಗಳಿವೆ !

ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಅವರಿಗೆ ಹಂತಕರು ಒಟ್ಟು 42 ಕಡೆಗಳಲ್ಲಿ ಇರಿದ ಗಾಯಗಳಿವೆ ಎಂದು ಮರಣೋತ್ತರ ಪರೀಕ್ಷೆ ವರದಿ ತಿಳಿಸಿದೆ.

ವಿಧಿ ವಿಜ್ಞಾನ ವಿಭಾಗದ ಡಾ. ಸುನಿಲ ಬಿರಾದಾರ ಮರಣೋತ್ತರ ಪರೀಕ್ಷೆ ವಿವರಗಳನ್ನು ಮಾಧ್ಯಮಗಳಿಗೆ ನೀಡಿದ್ದು, ಕುತ್ತಿಗೆ ಬಳಿ 2 ಬಾರಿ 12 ಇಂಚಿನಷ್ಟು ಕೊಯ್ದಿದ್ದು, ಚಾಕು 2-3 ಇಂಚಿನಷ್ಟು ಒಳಗೆ ಹೋಗಿ ಗಾಯವುಂಟಾಗಿದ್ದು, ಇರಿದ ಜಾಗದಲ್ಲೇ 2-3 ಬಾರಿ ಇರಿದಿದ್ದಾರೆ ಎಂದು ತಿಳಿಸಿದ್ದಾರೆ.

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಗುರೂಜಿಯವರ ಮರಣೋತ್ತರ ಪರೀಕ್ಷೆ ಮುಕ್ತಾಯಗೊಡಿದ್ದು ಶವವನ್ನು ಅವರ ಸಂಬಂಧಿಕರಿಗೆ ಹಸ್ತಾಂತರ ಮಾಡಲಾಯಿತು.

ಸುರಿಯುವ ಮಳೆಯ ನಡುವೆಯೇ ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಶವವನ್ನು ಮೆರವಣಿಗೆ ಮೂಲಕ ಸಾಗಿಸಲಾಯಿತು.

ಶವಗಾರದಿಂದ ಅಂತ್ಯಕ್ರಿಯೆ ಸಾಗಿಸುವ ವಾಹನಕ್ಕೆ ಶವವನ್ನು ಸಾಗಿಸುವಾಗ ಸಿಬ್ಬಂದಿ ಹಾಗೂ ಸಂಬಂಧಿಗಳು ಕಣ್ಣೀರು ಹಾಕಿದರು. ಸುಳ್ಳ ರಸ್ತೆಯ ಅಂತ್ಯಕ್ರಿಯೆ ಜಾಗದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಳಿ ದೇವತೆಯ ಒಂದು ಕೈಯಲ್ಲಿ ಸಿಗರೇಟು ಮತ್ತು ಕೈಯಲ್ಲಿ ಎಲ್ಜಿಬಿಟಿಕ್ಯೂ ಭಾವುಟ

Wed Jul 6 , 2022
ತಮ್ಮ ಸಾಕ್ಷ್ಯಚಿತ್ರದಲ್ಲಿ ಕಾಳಿ ದೇವತೆಯ ಒಂದು ಕೈಯಲ್ಲಿ ಸಿಗರೇಟು ಮತ್ತು ಕೈಯಲ್ಲಿ ಎಲ್ಜಿಬಿಟಿಕ್ಯೂ ಭಾವುಟ ಕೊಟ್ಟ ಕಾರಣಕ್ಕಾಗಿ ತಮಿಳಿನ ಖ್ಯಾತ ನಿರ್ದೇಶಕಿ ಲೀನಾ ಮಣಿಮೇಕಲೈ ವಿರುದ್ಧ ದೇಶಾದ್ಯಂತ ಆಕ್ರೋಶ ಹೊತ್ತಿಕೊಡಿದೆ. ಈಗಾಗ್ಲೆ ಕೆಲ ಕಡೆ ಲೀನಾ ವಿರುದ್ಧ ದೂರುಗಳು ದಾಖಲಾಗಿದ್ದು, ಮುಂಬೈನಲ್ಲಿ ಎಫ್‍.ಐ.ಆರ್ ಕೂಡ ದಾಖಲಾಗಿತ್ತು. ಇದೀಗ ಭಾರತದಲ್ಲಿ ಅವರ ಟ್ವಿಟರ್ ಖಾತೆಯನ್ನು ತಡೆಹಿಡಿಯಲಾಗಿದೆ. ಲೀನಾ ಅವರು ತಮ್ಮ ಸಾಕ್ಷ್ಯಚಿತ್ರದ ಪೋಸ್ಟರ್ ಒಂದನ್ನು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಆ […]

Advertisement

Wordpress Social Share Plugin powered by Ultimatelysocial