ರೆಸ್ಟೋರೆಂಟ್ ಸ್ಟೈಲ್ ಚಿಕನ್ ಗ್ರೇವಿ ಮಾಡುವ ವಿಧಾನ

 

ಬೇಕಾಗುವ ಪದಾರ್ಥಗಳು:

  • ಚಿಕನ್ – ಅರ್ಧ ಕೆಜಿ
  • ಒಣಗಿದ ಮೆಣಸಿನಕಾಯಿ – 8-10
  • ಈರುಳ್ಳಿ – 2
  • ಟೊಮೆಟೊ – 2
  • ಗೋಡಂಬಿ – ಸ್ವಲ್ಪ
  • ಕೊತ್ತಂಬರಿ ಸೊಪ್ಪು- ಸ್ವಲ್ಪ
  • ಅರಿಸಿನ- ಸ್ವಲ್ಪ
  • ಎಣ್ಣೆ – ಸ್ವಲ್ಪ
  • ಉಪ್ಪು – ರುಚಿಗೆ ತಕ್ಕಷ್ಟು
  • ಅಚ್ಚ ಖಾರದ ಪುಡಿ- 1 ಚಮಚ
  • ದನಿಯಾ ಪುಡಿ – 1 ಚಮಚ
  • ಗರಂಮಸಾಲ – 1 ಚಮಚ
  • ಕಸೂರಿ ಮೇಥಿ – 1 ಚಮಚ
  • ಶುಂಠಿ-ಬೆಳ್ಳುಳ್ಳಿ ಪೇಸ್ಟ್ –  ಸ್ವಲ್ಪ

ಮಾಡುವ ವಿಧಾನ:

ಮೊದಲು ಒಣಗಿದ ಮೆಣಸಿನ ಕಾಯಿಯನ್ನು ಸ್ವಲ್ಪ ಹೊತ್ತು ನೀರಿನಲ್ಲಿ ನೆನೆಸಿಟ್ಟುಕೊಳ್ಳಬೇಕು. ನಂತರ ನೆನೆದ ಒಣಮೆಣಸಿನಕಾಯಿ ಟೊಮೆಟೊ ಮತ್ತು ಗೋಡಂಬಿಯನ್ನು ಮಿಕ್ಸಿ ಜಾರಿಗೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಬೇಕು.

ಬಾಣಲೆಯನ್ನು ಒಲೆಯ ಮೇಲಿಟ್ಟು ಬಿಸಿಯಾದ ಬಳಿಕ 2 ಚಮಚ ಎಣ್ಣೆ ಹಾಕಿ ಈರುಳ್ಳಿಯನ್ನು ಕೆಂಪಗೆ ಹುರಿದುಕೊಳ್ಳಿ. ಬಳಿಕ ಇದಕ್ಕೆ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ ಒಂದು ನಿಮಿಷ ಹುರಿಯಿರಿ. ನಂತರ ತೊಳೆದಿಟ್ಟ ಚಿಕನ್ ಸೇರಿಸಿ ಅದಕ್ಕೆ ಅರಿಸಿನ, ಉಪ್ಪು, ಅಚ್ಚ ಖಾರದ ಪುಡಿ, ದನಿಯಾ ಪುಡಿ ಹಾಕಿ. ಚಿಕನ್ ಅರ್ಧ ಬೇಯುವವರೆಗೂ ಎಣ್ಣೆಯಲ್ಲಿ ಫ್ರೈ ಮಾಡಿ.

ಈಗ ರುಬ್ಬಿದ ಮಸಾಲೆಯನ್ನು ಸೇರಿಸಿ ಎಣ್ಣೆ ಬಿಡುವವರೆಗೂ ಬೇಯಿಸಿ. ಕೊನೆಯಲ್ಲಿ ಗರಂಮಸಾಲೆ, ಕಸೂರಿ ಮೇಥಿ, ಕೊತ್ತಂಬರಿ ಸೊಪ್ಪು ಹಾಗೂ ಅರ್ಧ ಲೋಟ ನೀರು ಸೇರಿಸಿ. 4 ನಿಮಿಷ ಕುದಿಸಿಕೊಂಡರೆ ರುಚಿಕರವಾದ ರೆಸ್ಟೋರೆಂಟ್ ಸ್ಟೈಲ್ ಚಿಕನ್ ಗ್ರೇವಿ ಸವಿಯಲು ಸಿದ್ಧ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿಎಂ ಹೊರತುಪಡಿಸಿ ಕೆಲವರ ಬದಲಾವಣೆ ಆಗಬೇಕು:ರೇಣುಕಾಚಾರ್ಯ.

Fri Jan 14 , 2022
ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ರಾಜಕೀಯ ಕಾರ್ಯದರ್ಶಿ ಸ್ಥಾನ ಏನೂ ನನಗೆ ದೊಡ್ಡದಲ್ಲ. ಸುಮ್ಮನೆ ಮನೆ ಕೊಟ್ಟಿದ್ದಾರೆ, ಚೇಂಬರ್ ಕೊಟ್ಟಿದ್ದಾರೆ ಅಷ್ಟೇ. ಅದರಲ್ಲಿ ಬಹಳ ಕೆಲಸ ಇಲ್ಲ, ನಾನೂ ಏನೂ ಅದಕ್ಕೇ ಅಂಟಿಕೊಂಡಿಲ್ಲ. ಸಿಎಂ ಹೊರತುಪಡಿಸಿ ಕೆಲವರ ಬದಲಾವಣೆ ಆಗಬೇಕು. ಅದೇ ಮುಖ ನೋಡಿ ನೋಡಿ ಸಾಕಾಗಿದೆ ಜನರಿಗೆ. ಅಭಿವೃದ್ಧಿ ಕೆಲಸಗಳು ಆಗಬೇಕು ಎಂದು ಹೇಳಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿಗಿಂತ ಶಾಸಕನಾಗೇ ಇರುವೆ ಎಂದೂ ರೇಣುಕಾಚಾರ್ಯ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. […]

Advertisement

Wordpress Social Share Plugin powered by Ultimatelysocial