ಮುಖ್ಯಮಂತ್ರಿಯಾಗುತ್ತೇನೆಂದು ಒಬ್ಬ ಹುಚ್ಚನಂತೆ ಓಡಾಡ್ತಿದಾನೆ

ಮುಖ್ಯಮಂತ್ರಿಯಾಗುತ್ತೇನೆಂದು ಒಬ್ಬ ಹುಚ್ಚನಂತೆ ಓಡಾಡ್ತಿದಾನೆ: ಬಸನಗೌಡ ಪಾಟೀಲ

ಬೆಳಗಾವಿ: ‘ವ್ಯಕ್ತಿಯೊಬ್ಬ ಜನವರಿ 14ರ ನಂತರ ನಾನು ಮುಖ್ಯಮಂತ್ರಿ ಆಗುತ್ತೇನೆಂದು ಹೇಳಿಕೊಂಡು ಹುಚ್ಚನಂತೆ ಓಡಾಡುತ್ತಿದ್ದಾನೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ಅವರನ್ನು ಟೀಕಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಆತ‌, ರಾಜ್ಯದ ಮಹಾನ್ ನಾಯಕರನ್ನು ಎಲ್ಲ ರೀತಿಯಲ್ಲೂ ಸಂತೃಪ್ತಿಪಡಿಸಿದ್ದೇನೆ. ಅವರಿಗೆ ಸಕಲ ಐಶ್ವರ್ಯ- ಬೋಗಗಳನ್ನು ದಯಪಾಲಿಸಿದ್ದೇನೆ. ಹೀಗಾಗಿ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿಕೊಂಡಿದ್ದಾರೆ’ ಎಂದು ಆರೋಪಿಸಿದರು.

ಜನವರಿ ನಂತರ ರಾಜಕೀಯ ಬದಲಾವಣೆ ಆಗುತ್ತದೆಯೇ ಎಂಬ ಪ್ರಶ್ನೆಗೆ, ‘ನಮ್ಮ ಪ್ರಧಾನಿ ಬಹಳ ಗಟ್ಟಿಯಾಗಿದ್ದಾರೆ. ಯಾವುದೇ ಆಸೆ- ಆಮಿಷಗಳಿಗೆ ಒಳಗಾಗಿ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಮುಖ್ಯಮಂತ್ರಿ ಆಗುತ್ತೇನೆಂದು ಹೇಳಿಕೊಂಡು ಓಡಾಡುವವರ ಬಾಯಿಗೆ ಬೀಗ ಹಾಕಬೇಕು. ಅಂಥವರು ಮುಖ್ಯಮಂತ್ರಿಯಾದರೆ ದೊಡ್ಡ ಅನಾಹುತ ಆಗುತ್ತದೆ ಎಂದು ಈಚೆಗೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಚ್ಚರಿಕೆ ಕೊಟ್ಟಿದ್ದೇನೆ’ ಎಂದರು.

Please follow and like us:

Leave a Reply

Your email address will not be published. Required fields are marked *

Next Post

ಸ್ಕೂಟಿಯಲ್ಲಿ ಮಹಿಳೆಯನ್ನು ಎಳೆದು ನಡು ರಸ್ತೆಯಲ್ಲಿ ಬಿಸಾಡಿದ ಪಾಪಿಗಳು..!

Fri Dec 17 , 2021
ಸ್ಕೂಟಿಯ ಮೇಲಿದ್ದ ಖದೀಮರು ಮಹಿಳೆಯ ಮೊಬೈಲ್​ನ್ನು ಕಸಿಯುವ ಸಲುವಾಗಿ ಆಕೆಯನ್ನು ಸ್ಕೂಟಿಯಲ್ಲಿ 200 ಮೀಟರ್​ವರೆಗೆ ಎಳೆದೊಯ್ದ ಶಾಕಿಂಗ್​ ಘಟನೆಯು ದೆಹಲಿಯ ಶಾಲಿಮಾರ್​ ಬಾಗ್​ ಪ್ರದೇಶದಲ್ಲಿ ನಡೆದಿದೆ. ಕ್ಯಾಮಾರದಲ್ಲಿ ಬೆಚ್ಚಿ ಬೀಳಿಸುವ ದೃಶ್ಯವು ಸೆರೆಯಾಗಿದೆ. ಆಘಾತಕಾರಿ ವಿಡಿಯೋದಲ್ಲಿ ಸ್ಕೂಟಿಯ ಮೇಲಿದ್ದ ಇಬ್ಬರು ಕಳ್ಳರು ರಸ್ತೆಯಲ್ಲಿ ತಪ್ಪಾದ ದಿಕ್ಕಿನಲ್ಲಿ ಸ್ಕೂಟಿ ಚಲಾಯಿಸಿಕೊಂಡು ಬಂದಿದ್ದಾರೆ. ಸ್ಕೂಟಿ ಸವಾರಿ ಮಾಡುತ್ತಿದ್ದ ವ್ಯಕ್ತಿಯು ಮಹಿಳೆಯನ್ನು ಎಳೆದುಕೊಂಡು ಬಂದಿದ್ದಾನೆ ಹಾಗೂ ನಡು ರಸ್ತೆಯಲ್ಲಿ ಆಕೆಯನ್ನು ಎಸೆಯಲಾಗಿದೆ. ಮಹಿಳೆಯು ನಡು […]

Advertisement

Wordpress Social Share Plugin powered by Ultimatelysocial