ಚಿಕ್ಕೋಡಿ ಚುನಾವಣಾಧಿಕಾರಿಗೆ ಉಮೇದುವಾರಿಕೆ ಸಲ್ಲಿಸಿದ ಗಣೇಶ ಹುಕ್ಕೇರಿ. ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ. ನಾಮಪತ್ರ ಸಲ್ಲಿಸಿದ ಬಳಿಕ ಮಾದ್ಯಮಗಳಿಗೆ ಹೇಳಿಕೆ. ಕಾಂಗ್ರೆಸ್ ಪಕ್ಷದಿಂದ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದೇನೆ, ಕಳೆದ ಬಾರಿಗಿಂತಲೂ ಅಧಿಕ ಮತಗಳಿಂದ ಜಯಗಳಿಸುವ ವಿಶ್ವಾಸವಿದೆ. ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಮೇಲೆ ಜನರ ಆರ್ಶೀವಾದ ಇದೆ. ಕ್ಷೇತ್ರದ ಜನತೆ ಜತೆ ಯಾವಾಗ್ಲೂ ಸಂಪರ್ಕದಲ್ಲಿದ್ದೇವೆ. ನೆರೆಹಾವಳಿ ಹಾಗೂ ಕೋವಿಡ್ ಸಂದರ್ಭದಲ್ಲಿ ನಮ್ಮ ಕೆಲಸಗಳು ನಮ್ಮ ಕೈ ಹಿಡಿಯಲಿವೆ. ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿರುವೆ. ಇನ್ನೆರಡು ದಿನಗಳಲ್ಲಿ ಬೃಹತ್ ರ್ಯಾಲಿ ಮೂಲಕ ನಾಮಪತ್ರ ಸಲ್ಲಿಸಲಿದೇನೆ. ಈ ರ್ಯಾಲಿಯಲ್ಲಿ ರಾಜ್ಯದ ನಾಯಕರು ಭಾಗಿಯಾಗಲಿದ್ದಾರೆ. ಸವದಿ ಹಾಗೂ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ವಿಚಾರ. ಅವರಿಬ್ಬರ ಸೇರ್ಪಡೆಯಿಂದ ಕಾಂಗ್ರೆಸ್ಗೆ ಮತ್ತಷ್ಟು ಬಲ ಹೆಚ್ಚಲಿದೆ.
ಈ ಬಾರಿ ರಾಜ್ಯದಲ್ಲಿ 150 ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎನ್ನುವ ವಿಶ್ವಾಸವಿದೆ. ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲಿದೆ. ಈ ಬಾರಿ ಕರ್ನಾಟಕದಲ್ಲಿ ಸ್ಥಿರ ಸರ್ಕಾರ ರಚಿಸುತ್ತೇವೆ.
https://play.google.com/store/apps/details?id=com.speed.newskannada