ಮ್ಯೂನಿಚ್: ಚೀನಾದೊಂದಿಗಿನ ಭಾರತದ ಸಂಬಂಧಗಳು ಪ್ರಸ್ತುತ ನಿರ್ಣಾಯಕ ಘಟ್ಟದಲ್ಲಿವೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ಗಡಿಯಲ್ಲಿ ಸೇನೆಯನ್ನು ನಿಯೋಜಿಸಬಾರದು ಎಂಬ ಒಪ್ಪಂದಗಳನ್ನು ಚೀನಾ ಉಲ್ಲಂಘಿಸಿರುವುದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿರುವುದಾಗಿ ತಿಳಿಸಿದ್ದಾರೆ.ಮ್ಯೂನಿಚ್ ಭದ್ರತಾ ಸಮ್ಮೇಳನದಲ್ಲಿ ಮಾತನಾಡಿದ ಎಸ್. ಜೈಶಂಕರ್, ದ್ವಿಪಕ್ಷೀಯ ಸಂಬಂಧಗಳ ಪ್ರಗತಿಯು ಗಡಿಯೊಳಗಿನ ಪರಿಸ್ಥಿತಿಗಳನ್ನು ಅವಲಂಬಿಸಿರುತ್ತದೆ ಎಂಬುದನ್ನು ಸ್ಪಷ್ಟಪಡಿಸಿದರು. 45 ವರ್ಷಗಳಿಂದ ಶಾಂತಿಯುತವಾಗಿದ್ದ ವಾಸ್ತವ ಗಡಿ ರೇಖೆಯುದ್ದಕ್ಕೂ ಚೀನಾದಂತಹ ದೊಡ್ಡ ದೊಡ್ಡ ದೇಶ ಒಪ್ಪಂದಗಳನ್ನು ಉಲ್ಲಂಘಿಸಿದರೆ ಅದು ಇಡೀ ಅಂತಾರಾಷ್ಟ್ರೀಯ ಸಮುದಾಯಕ್ಕೆ ಕಳವಕಾರಿ ಸಂಗತಿಯಾಗಿದೆ ಎಂದು ಹೇಳಿದರು.ದೂರದಲ್ಲಿರುವ ಸಣ್ಣ ಸಣ್ಣ ದೇಶಗಳಿಗೆ ಭಾರೀ ಪ್ರಮಾಣದಲ್ಲಿ ಸಾಲ ನೀಡುವ ಮೂಲಕ ಚೀನಾ ಆಯಕಟ್ಟಿನ ಪ್ರದೇಶಗಳ ಮೇಲೆ ಹಿಡಿತ ಸಾಧಿಸುತ್ತಿರುವುದು ಆತಂಕಕಾರಿ ಸಂಗತಿ ಎಂದು ಜೈ ಶಂಕರ್ ಹೇಳಿದರು. ವಿಲೀನದ ಅನ್ವೇಷಣೆಯಲ್ಲಿ ಮಾಡಲಾಗುತ್ತಿರುವ ಇಂತಹ ಕೃತ್ಯಗಳು ಇತರ ರಾಷ್ಟ್ರಗಳ ಸಾರ್ವಭೌಮತ್ವಕ್ಕೆ ಧಕ್ಕೆಯುಂಟಾಗುವಂತಹದ್ದು ಎಂದು ಅಭಿಪ್ರಾಯಪಟ್ಟರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada