ಹಿರಿಯ ಮುತ್ಸದ್ಧಿ ಎಚ್.ಡಿ.ಚೌಡಯ್ಯ ಅವರ ನಿಧನ !

ಮಂಡ್ಯ: ಹಿರಿಯ ಮುತ್ಸದ್ಧಿ ಎಚ್.ಡಿ.ಚೌಡಯ್ಯ ಅವರ ನಿಧನ ಅತೀವ ದುಃಖದ ಸಂಗತಿ. 94 ವರ್ಷದ ಹಿರಿಯರಾಗಿದ್ದ ಮಾಜಿ ಶಾಸಕರು ಹಾಗೂ ಜನಮುಖಿ ಮುತ್ಸದ್ಧಿ ರಾಜಕಾರಣಿ ಆಗಿದ್ದ ಇವರಿಗೆ ವಯೋ ಸಹಜ ಆರೋಗ್ಯ ಸಮಸ್ಯೆಗಳಿದ್ದವು. ಪತ್ನಿಯವರ ಅಗಲಿಕೆ ಬಳಿಕ ಬಹಳ ನೊಂದಿದ್ದರು.ಈ ನೋವು ಇವರ ಆರೋಗ್ಯವನ್ನು ಹದಗೆಡಿಸಿತ್ತು. ಶತಾಯುಷಿ ಆಗುತ್ತಾರೆ ಎನ್ನುವ ನನ್ನ ನಿರೀಕ್ಷೆಯನ್ನು ನಿರಾಸೆಗೊಳಿಸಿ ನಮ್ಮನ್ನು ಅಗಲಿದ್ದಾರೆ.ಇವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬ ವರ್ಗ ಮತ್ತು ಬಂಧುಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದರು.ಪಿಇಎಸ್ ಟ್ರಸ್ಟ್ ನ ಮಾಜಿ ಅಧ್ಯಕ್ಷರಾಗಿ, ಹಿರಿಯ ಸಹಕಾರಿ ಧುರೀಣರಾಗಿ, ಕಾವೇರಿ ಹೋರಾಟದ ಮುಂಚೂಣಿ ನಾಯಕರಾಗಿದ್ದವರು ಚೌಡಯ್ಯ ಅವರು. 4 ಬಾರಿ ಕೆರಗೋಡು ಕ್ಷೇತ್ರದ ಶಾಸಕರಾಗಿ, ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿ ಮಂಡ್ಯದ ಪ್ರತಿಷ್ಠಿತ ಪಿಇಟಿ ಅಧ್ಯಕ್ಷರಾಗಿ 31 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ್ದರು.ಚೌಡಯ್ಯನವರು ಮಂಡ್ಯದ ಸ್ವಾಭಿಮಾನಿ ರಾಜಕಾರಣದ ಪ್ರತೀಕವಾಗಿದ್ದರು. ಇವರ ಅಗಲಿಕೆಯಿಂದ ನನ್ನ ಸಹೃದಯಿ ಹಿತೈಷಿಯೊಬ್ಬರನ್ನು ಕಳೆದುಕೊಂಡಿದ್ದೀನಿ ಎಂದು ಸಿದ್ದರಾಮಯ್ಯ ಕಂಬನಿ ಮಿಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉತ್ತರಪ್ರದೇಶದಲ್ಲಿ ಇತ್ತೀಚೆಗೆ ಜಾತಿ ರಾಜಕಾರಣ ಮತ್ತು ಜಾತಿ ಆಧಾರಿತ ಪ್ರಚಾರ ಹೆಚ್ಚಾಗಿ ನಡೆಯುತ್ತಿದೆ!

Wed Feb 16 , 2022
ಲಕ್ನೋ ಫೆ.16: ಉತ್ತರಪ್ರದೇಶದಲ್ಲಿ ಇತ್ತೀಚೆಗೆ ಜಾತಿ ರಾಜಕಾರಣ ಮತ್ತು ಜಾತಿ ಆಧಾರಿತ ಪ್ರಚಾರ ಹೆಚ್ಚಾಗಿ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿಗಳಿಂದ ಪದೇ ಪದೇ ಧ್ರುಡೀಕರಣದ ಮಾತುಗಳು ಕೇಳಿ ಬರುತ್ತಿದ್ದು ವಿಪಕ್ಷಗಳ ಆಕ್ರೋಶ ಎಡೆ ಮಾಡಿದೆ. ನಿನ್ನೆ ಮತ್ತೋರ್ವ ಅಭ್ಯರ್ಥಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಕೈಸರ್‌ಗಂಜ್‌ನ ಲೋಕಸಭಾ ಸಂಸದ, ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿಯನ್ನು […]

Advertisement

Wordpress Social Share Plugin powered by Ultimatelysocial