ಮಣಿಕಾಂತ್ ಕದ್ರಿ, ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ಪುತ್ರ. ಸಿನಿಮಾ ಸಂಗೀತ ನಿರ್ದೇಶನದ ಹೊರತಾಗಿ ಮಣಿಕಾಂತ್ ಕದ್ರಿ, ತಮ್ಮ ತಂದೆ ಹೆಸರಲ್ಲಿ ಟ್ರಸ್ಟ್ ತೆರೆದು ಯುವ ಕಲಾವಿದರಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ.ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶಕನಾಗಿ ಕರಿಯರ್ ಆರಂಭಿಸಿದ್ದು 2006ರಲ್ಲಿ ತೆರೆ ಕಂಡ ಮಲಯಾಳಂನ ‘ಸ್ಮಾರ್ಟ್ ಸಿಟಿ’ ಚಿತ್ರದ ಮೂಲಕ. ‘ಗಣೇಶ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಸಂಗೀತ ನಿರ್ದೇಶಕನಾಗಿ ಹೆಜ್ಜೆ ಇಟ್ಟ ಮಣಿಕಾಂತ್ ಕದ್ರಿ ಕ್ರೇಜಿಲೋಕ, ಪೃಥ್ವಿ, ಸವಾರಿ, ಸವಾರಿ 2, ರನ್ ಆಂಟನಿ, ನಡುವೆ ಅಂತರವಿರಲಿ, ಮೂಕಹಕ್ಕಿ, ಮಳೆ ಬಿಲ್ಲೆ, ಸ್ವಯಂವರ, ಜಾತ್ರೆ, ಮಿಸ್ಟರ್ ಗರಗಸ, ಟಕ್ಕರ್, ಲವ್ ಯು ರಚ್ಚು ಸೇರಿದಂತೆ ಹಲವು ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಮುಂಬರುವ, ‘ಆಡಿಸಿದಾತ’ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದರೆ, ‘ಮೇಲೊಬ್ಬ ಮಾಯಾವಿ’ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಿದ್ದಾರೆ. ತುಳು ಚಿತ್ರರಂಗಕ್ಕೂ ಇವರ ಕೊಡುಗೆ ಅಪಾರ. ಎಲ್ಲಾ ಭಾಷೆಗಳೂ ಸೇರಿ ಇದುವರೆಗೂ ಸುಮಾರು 50ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ, ಹಿನ್ನೆಲೆ ಸಂಗಿತ ನೀಡಿದ್ದಾರೆ.ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನವಿರುವ ಹಲವು ಸಿನಿಮಾಗಳು ಬಿಡುಗಡೆಗೆ ರೆಡಿಯಾಗಿವೆ. ಡಾರ್ಲಿಂಗ್ ಕೃಷ್ಣ ಅಭಿನಯದ ‘ಮಿಸ್ಟರ್ ಬ್ಯಾಚುಲರ್’, ಬಿ.ಎಸ್. ಲಿಂಗದೇವರು ನಿರ್ದೇಶನದ ‘ವಿರಾಟಪುರ ವೈರಾಗಿ’, ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ಬಿರ್ದುದ ಕಂಬಳ’, ಗುರುದೇಶಪಾಂಡೆ ನಿರ್ಮಾಣದ ‘ಪೆಂಟಗಾನ್’, ಕನ್ನಡ ಹಾಗೂ ತೆಲುಗಿನಲ್ಲಿ ನಿರ್ಮಾಣ ಆಗುತ್ತಿರುವ ‘ಲೈನ್ ಮ್ಯಾನ್’ ಚಿತ್ರಗಳು ಶೀಘ್ರದಲ್ಲೇ ಬಿಡುಗಡೆ ಆಗಲಿವೆ.ಮಣಿಕಾಂತ್ ಕದ್ರಿ, ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ಪುತ್ರ. ಸಿನಿಮಾ ಸಂಗೀತ ನಿರ್ದೇಶನದ ಹೊರತಾಗಿ ಮಣಿಕಾಂತ್ ಕದ್ರಿ, ತಮ್ಮ ತಂದೆ ಹೆಸರಲ್ಲಿ ಟ್ರಸ್ಟ್ ತೆರೆದು ಯುವ ಕಲಾವಿದರಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ. ಅಷ್ಟೇ ಅಲ್ಲ, ನಶಿಸಿ ಹೋಗುತ್ತಿರುವ ಜಾನಪದ ಹಾಡುಗಳನ್ನು ಉಳಿಸಿಕೊಳ್ಳುವ ಕೆಲಸ ಕೂಡಾ ಈ ಟ್ರಸ್ಟ್ ಮೂಲಕ ನಡೆಯುತ್ತಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de…