ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎನ್ನುವ ಮಾತನ್ನು ಆಡುತ್ತಿದ್ದಾರೆ. ಆದರೆ, ಕುಮಾರಸ್ವಾಮಿಯವರ ಮಾತಿನ ಮೇಲೆ ಖುದ್ದು ಜೆಡಿಎಸ್ ಶಾಸಕರಿಗೆ ನಂಬಿಕೆ ಇದ್ದಂತಿಲ್ಲ.
ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲು ಬಯಸುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಈಗಾಗಲೇ, ಬಹಿರಂಗವಾಗಿಯೇ ಜೆಡಿಎಸ್ ಬಿಡುವುದಾಗಿ ನಾಲ್ಕೈದು ಶಾಸಕರು ಹೇಳಿದ್ದಾಗಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಹಿರಂಗವಾಗಿಯೇ ಕಾಂಗ್ರೆಸ್ ಪರ ಕೆಲವರು ಕೆಲಸ ಮಾಡಿದವರೂ ಇದ್ದಾರೆ.
ತುಮಕೂರು: ಇಂಜಿನಿಯರ್ ಸೇರಿ ಒಂದೇ ಕುಟುಂಬದ ಮೂವರು ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಮೂಲಕ ಹಾದುಹೋಗುವ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ. ಹೇಮಾವತಿ ನಾಲಾ ವಲಯ ಕಚೇರಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಮೇಶ್(55), ಪತ್ನಿ ಮಮತಾ (45) ಮತ್ತು ಶುಭಾ(25) ಮೃತರು. ರಮೇಶ್ ಕೆ.ಬಿ.ಕ್ರಾಸ್ನಲ್ಲಿರುವ ಹೇಮಾವತಿ ಕಚೇರಿಯಲ್ಲಿ ಎಇಇ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಪತ್ನಿ ಮಮತಾ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿದ್ದರು. ಕೆ.ಆರ್.ನಗರ ಮೂಲದ […]