ಅಂತಾರಾಜ್ಯ ಜಲ ವಿವಾದ ಕುರಿತು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಕಾನೂನು ತಜ್ಞರೊಂದಿಗೆ ಸಭೆ ನಡೆಯಿತು.

ನವದೆಹಲಿಯ ಕರ್ನಾಟಕ ಭವನದಲ್ಲಿ ಸಭೆ ನಡೆಸಿದ್ದು, ಸಚಿವರಾದ ಜೆ.ಸಿ.ಮಾಧುಸ್ವಾಮಿ, ಗೋವಿಂದ ಕಾರಜೋಳ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಸೇರಿದಂತೆ ಹಿರಿಯ ಕಾಣುತ್ತಿದ್ದರು ಸಭೆಯಲ್ಲಿ ಉಪಸ್ಥಿತರಿದ್ದರು.ಸಭೆಯಲ್ಲಿ ಕೃಷ್ಣಾ ಮತ್ತು ಕಾವೇರಿ ಕೊಳ್ಳದ ಜಲ ವ್ಯಾಜ್ಯಗಳ ಕುರಿತು ಕಾನೂನು ಹೋರಾಟಗಳ ಬಗ್ಗೆ ಮಹತ್ವದ ಸಮಾಲೋಚನೆ ನಡೆಸಲಾಯಿತು.

ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆ ನೋಟಿಫಿಕೇಷನ್, ಮೇಕೆದಾಟು ವಿವಾದ, ನದಿ ಜೋಡಣೆ ಕುರಿತು ಕಾನೂನಾತ್ಮಕವಾಗಿ ರಾಜ್ಯ ಹೊಂದಬೇಕಾದ ನಿಲುವು ಸೇರಿದಂತೆ ಎಲ್ಲ ಆಯಾಮದಲ್ಲಿ ಚರ್ಚೆ ನಡೆಯಿತು ಎಂದು ತಿಳಿದುಬಂದಿದೆ.

ಈ ನಡುವೆ ಚುನಾವಣಾ ಪ್ರಚಾರ ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ.ನಡ್ಡಾ ಅವರು, ಇಂದು ದೆಹಲಿಗೆ ವಾಪಸ್ಸಾಗುತ್ತಿದ್ದು, ಸಂಜೆ ವೇಳೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ನಡ್ಡಾ ಅವರನ್ನು ಭೇಟಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಜೆಪಿ ನಡ್ಡಾ ಭೇಟಿ ವೇಳೆ ರಾಜ್ಯ ರಾಜಕೀಯ ವಿಚಾರಗಳ ಕುರಿತಂತೆ ಚರ್ಚೆಗಳು ನಡೆಯಲಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

:Covid-19 ಒಂದು ಸಾಂಕ್ರಾಮಿಕ ರೋಗವಾಗಿದ್ದು, ಕಳೆದ 100 ವರ್ಷಗಳಲ್ಲಿ ಮಾನವಕುಲವು ಅಂತಹ ಬಿಕ್ಕಟ್ಟನ್ನು ನೋಡಿರಲಿಲ್ಲ:ಕೋವಿಡ್ ಕುರಿತು ಪ್ರಧಾನಿ ಮೋದಿ.

Tue Feb 8 , 2022
ಈ ಬಿಕ್ಕಟ್ಟು ಅದರ ಸ್ವರೂಪವನ್ನು ಬದಲಾಯಿಸುತ್ತದೆ ಮತ್ತು ಜನರಿಗೆ ತೊಂದರೆ ಉಂಟುಮಾಡುತ್ತದೆ, ಇಡೀ ದೇಶ ಮತ್ತು ಪ್ರಪಂಚವು ಅದರ ವಿರುದ್ಧ ಹೋರಾಡುತ್ತಿದೆ, ‘ಎಂದು ಅವರು ಹೇಳಿದರು.covid -19 ಸಾಂಕ್ರಾಮಿಕ ಸಮಯದಲ್ಲಿ ಸಮಾಜದಲ್ಲಿ ಪ್ರತಿಕೂಲ ಪರಿಣಾಮ ಬೀರುವ ಎಲ್ಲಾ ಸಾಮಾಜಿಕ ಗುಂಪುಗಳಿಗಾಗಿ ಕೇಂದ್ರವು ವಿವಿಧ ಉಪಕ್ರಮಗಳನ್ನು ಕೈಗೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯಕ್ಕೆ ಪ್ರತ್ಯುತ್ತರಿಸಿದರು ಮತ್ತು covid -19 […]

Advertisement

Wordpress Social Share Plugin powered by Ultimatelysocial