ಹುಟ್ಟುಹಬ್ಬದಂದು 11 ಹಸುಗಳನ್ನು ದತ್ತು ಪಡೆದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ 62ನೇ ವರ್ಷಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ರಾಷ್ಟ್ರೋತ್ಥಾನ ಗೋಶಾಲೆಯಿಂದ 11 ಹಸುಗಳನ್ನು ದತ್ತು ಪಡೆದಿದ್ದಾರೆ.ಶುಕ್ರವಾರ ಪತ್ನಿ ಚೆನ್ನಮ್ಮ ಜತೆ ಬೊಮ್ಮಾಯಿ ಗೋಪೂಜೆ ನೆರವೇರಿಸಿದರು.ಬಳಿಕ ಹಸು ಮತ್ತು ಕರುವನ್ನು ತಮ್ಮ ಮನೆಯೊಳಗೆ ತಂದು, ಗೋಗ್ರಾಸ ನೀಡಿದರು.ಬಾಲಬ್ರೂಯಿ ಅತಿಥಿಗೃಹದ ಬಳಿಕ ಮಾರುತಿ ದೇವಸ್ಥಾನಕ್ಕೂ ಭೇಟಿ ನೀಡಿದ ಸಿಎಂ, ರಾಜ್ಯದ ಜನತೆಯ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ಸಿಎಂ ಕಚೇರಿಯ ಪ್ರಕಟಣೆ ಹೇಳಿದೆ.ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಉತ್ತರ ಪ್ರದೇಶದ ಸಿಎಂ ಆದಿತ್ಯನಾಥ್, ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಜನ್ಮದಿನದ ಶುಭಾಶಯ ಕೋರಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇತಿಹಾಸದಲ್ಲೇ ಪ್ರಥಮ; ರಷ್ಯಾದಲ್ಲಿ ದಾಖಲೆ 10 ಲಕ್ಷ ಜನಸಂಖ್ಯೆ ಕುಸಿತ !

Sat Jan 29 , 2022
ಮಾಸ್ಕೊ: ರಷ್ಯಾದ ಜನಸಂಖ್ಯೆ 2021ರಲ್ಲಿ ಹತ್ತು ಲಕ್ಷದಷ್ಟು ಕುಸಿದಿದೆ ಎಂದು ದೇಶದ ಅಂಕಿ ಸಂಖ್ಯೆಗಳ ಸಂಸ್ಥೆಯಾದ ರೊಸ್ಟಾಟ್ ಪ್ರಕಟಿಸಿದೆ. ಸೋವಿಯತ್ ಒಕ್ಕೂಟ ಪತನದ ಬಳಿಕ ರಷ್ಯಾದಲ್ಲಿ ಬೃಹತ್ ಪ್ರಮಾಣದಲ್ಲಿ ಜನಸಂಖ್ಯೆ ಕುಸಿದ ಮೊದಲ ನಿದರ್ಶನ ಇದಾಗಿದೆ.ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕದ ಮೊದಲ ಪ್ರಕರಣ ದಾಖಲಾದ ಬಳಿಕ ಇದುವರೆಗೆ 6.60 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿಗೆ ಬಲಿಯಾಗಿರುವುದು ಜನಸಂಖ್ಯೆ ಕುಸಿತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.2020ರಲ್ಲಿ ದೇಶದ ಜನಸಂಖ್ಯೆ 5 ಲಕ್ಷದಷ್ಟು ಕಡಿಮೆಯಾಗಿದ್ದು, 2021ರಲ್ಲೂ […]

Advertisement

Wordpress Social Share Plugin powered by Ultimatelysocial