ಮೈಸೂರು: ಅಲ್ಖೈದಾಗೂ ಕರ್ನಾಟಕಕ್ಕೂ ಯಾವುದೇ ಸಂಬಂಧವಿಲ್ಲ. ಮುಸ್ಕಾನ್ ಎಂಬ ಹುಡುಗಿಗೆ ಆ ಸಂಘಟನೆಯೇ ಗೊತ್ತಿಲ್ಲ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಅಲ್ಖೈದಾ ಸಂಘಟನೆ ಮುಖ್ಯಸ್ಥ ಮುಸ್ಕಾನ್ ಬಗ್ಗೆ ಪ್ರಸ್ತಾಪಿಸಿದ್ದಾನೆ.
ಆದ್ರೆ ಮುಸ್ಕಾನ್ಗೂ ಅಲ್ಖೈದಾಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದರು.
ಇದೆಲ್ಲಾ ಬಿಜೆಪಿಯವರ ಸೃಷ್ಟಿ. ಅಲ್ ಖೈದಾ, ಪಾಲಾ ಖೈದಾ ಎಂದು ಇವರೇ ಸೃಷ್ಟಿ ಮಾಡುತ್ತಿದ್ದಾರೆ. ಅಲ್ ಖೈದಾ ಇದ್ದರೆ ಅವರನ್ನು ಹುಡುಕಿ ಬಂಧಿಸಿ ಎಂದು ಸವಾಲು ಹಾಕಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada