ಸಿ.ಎಂ.ಇಬ್ರಾಹಿಂ ಹಚ್ಚಿದ ಬೆಂಕಿಗೆ ನಲುಗುತ್ತಿರುವ ಕಾಂಗ್ರೆಸ್, ಸಿದ್ದರಾಮಯ್ಯ

ಸಿ.ಎಂ.ಇಬ್ರಾಹಿಂ ಒಬ್ಬ ಉತ್ತಮ ವಾಗ್ಮಿ, ಹಿರಿಯ ಮುಖಂಡ, ಅವರು ರಾಜೀನಾಮೆ ನೀಡಿ ಏನು ಮಾಡ್ಯಾರು ಎನ್ನುವ ಕಾಂಗ್ರೆಸ್ಸಿಗರ ಲೆಕ್ಕಾಚಾರ ದಿನದಿಂದ ದಿನಕ್ಕೆ ಉಲ್ಟಾ ಹೊಡೆಯುತ್ತಿದೆ. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ತಪ್ಪಿದ ನಂತರ ಇಬ್ರಾಹಿಂ ಅವರು ಇಡುತ್ತಿರುವ ರಾಜಕೀಯ ಹೆಜ್ಜೆಗೆ ಕೈ ನಲುಗಲು ಆರಂಭಿಸಿದೆ.ಪ್ರೇಮಿಗಳ ದಿನವಾದ ಫೆಬ್ರವರಿ ಹದಿನಾಲ್ಕರಂದು ತಮ್ಮ ಮುಂದಿನ ರಾಜಕೀಯ ಹೆಜ್ಜೆಯ ಬಗ್ಗೆ ಸಂಪೂರ್ಣ ಚಿತ್ರಣವನ್ನು ನೀಡುವುದಾಗಿ ಹೇಳಿರುವ ಇಬ್ರಾಹಿಂ, ತಾವು ಪಕ್ಷಕ್ಕೆ ಸೇರುತ್ತಾರೆ ಎನ್ನುವುದರ ಬಗ್ಗೆ ಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿಕೆಯನ್ನು ನೀಡುತ್ತಿದ್ದಾರೆ.ಮೊದಮೊದಲು ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಬಹುದು ಎನ್ನುವ ಲೆಕ್ಕಾಚಾರವಿತ್ತು. ಅವರು ರಾಜೀನಾಮೆ ಘೋಷಿಸುವುದಾಗಿ ಪ್ರಕಟಿಸಿದ ದಿನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಅವರನ್ನು ಭೇಟಿಯಾಗಿದ್ದರು. ಆದರೆ, ಇಬ್ರಾಹಿಂ ತಮ್ಮ ಮುಂದೆ ಮೂರು ಪಕ್ಷಗಳ ಪೈಕಿ ಯಾವುದಾದರೂ ಒಂದು ಪಕ್ಷ ಸೇರುವ ಆಯ್ಕೆಯಿದೆ ಎಂದು ಹೇಳಿದ್ದರು.ಆದರೆ, ಕೆಲವು ದಿನಗಳಿಂದ ಇಬ್ರಾಹಿಂ ಇಡುತ್ತಿರುವ ರಾಜಕೀಯ ಹೆಜ್ಜೆಗಳು, ರಾಜ್ಯ ಪ್ರವಾಸ, ಭೇಟಿಯಾಗುತ್ತಿರುವ ರಾಜಕೀಯ ಮತ್ತು ಧಾರ್ಮಿಕ ಮುಖಂಡರ ಭೇಟಿಯನ್ನು ಅವಲೋಕಿಸಿದರೆ, ಕಾಂಗ್ರೆಸ್ಸಿಗೆ ಮುಂದಿನ ದಿನಗಳಲ್ಲಿ ಬಹುದೊಡ್ಡ ಆಘಾತವನ್ನು ನೀಡುವ ಸಾಧ್ಯತೆಯಿಲ್ಲದಿಲ್ಲ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರೆ ಸ್ವೀಕರಿಸದ ಆರೋಪ: ಸೋಮಶೇಖರ್‌ ಕೋಪ ಶಮನ ಮಾಡಿದ ಕೆ.ಸುಧಾಕರ್

Thu Feb 3 , 2022
ಬೆಂಗಳೂರು ಫೆಬ್ರವರಿ 03: ತಮ್ಮ ಕರೆ ಸ್ವೀಕರಿಸದ್ದಕ್ಕೆ ಶಾಸಕ ಸೋಮಶೇಖರ ರೆಡ್ಡಿ ಆಕ್ರೋಶಗೊಂಡ ಬೆನ್ನಲ್ಲೆ ಇಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಸೋಮಶೇಖರ್ ರೆಡ್ಡಿ ಅವರು ಆರೋಗ್ಯ ಸರಿ ಇಲ್ಲದ ಸಮಯದಲ್ಲಿ ನನಗೆ ಕರೆ ಮಾಡಿದ್ದರು.ಅವರು ನನ್ನ ಆತ್ಮೀಯ ಸ್ನೇಹಿತರು ಎಂದು ಸುಧಾಕರ್ ಹೇಳಿದ್ದಾರೆ.ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ ಸುಧಾಕರ್, ‘ಸೋಮಶೇಖರ್ ರೆಡ್ಡಿ ನನಗೆ ಕರೆ ಮಾಡಿದ್ದರು. ಆಗ ನನಗೆ ಆರೋಗ್ಯ ಸರಿ ಇರಲಿಲ್ಲ. ಹೀಗಾಗಿ […]

Advertisement

Wordpress Social Share Plugin powered by Ultimatelysocial