ಹಿರಿಯ ಜಾನಪದ ಕಲಾವಿದ ಹಾಗೊ ಗಾಯಕ ಬಸಲಿಂಗಯ್ಯ ಹಿರೇಮಠ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವಂತ ಅವರು, ಬಸಲಿಂಗಯ್ಯ ಹಿರೇಮಠ ಅವರು ಕರ್ನಾಟಕದಲ್ಲಿ ಜಾನಪದ ಕಲೆಯನ್ನು ವಿಶೇಷವಾಗಿ ಉತ್ತರ ಕರ್ನಾಟಕ ಶೈಲಿಯ ಜಾನಪದ ಗೀತೆ ಹಾಗೂ ಸಂಗೀತವನ್ನು ಜೀವಂತವಿರಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತಿದ್ದರು ಎಂದಿದ್ದಾರೆ.
ಅವರ ನಿಧನದಿಂದ ಕನ್ನಡ ಸಾರಸ್ವತ ಹಾಗೂ ಜಾನಪದ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ಆಘಾತವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ಆ ಭಗವಂತ ನೀಡಲಿ ಎಂದು ಮುಖ್ಯಮಂತ್ರಿಗಳು ಕಂಬನಿ ಮಿಡಿದಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada