ಶಿವಮೊಗ್ಗ: ಮಹಾರಾಷ್ಟ್ರ ಸಿಎಂ ಆಕಾಶದಿಂದ ಇಳಿದು ಬಂದಿಲ್ಲ ಅಂಥ ಸಚಿವ ಈಶ್ವರಪ್ಪನವುರ ಟಾಂಗ್ ಮಾಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆ ಹೇಳಿದ್ರು. ಇದೇ ವೇಳೆ ಅವರು ಮಾತನಾಡುತ್ತ, ನಾಡು, ನುಡಿಗೆ, ಗಡಿಗೆ ಸಂಬಂಧಪಟ್ಟಂತೆ ಮಾಡುತ್ತಿರುವ ಕಿಡಿಗೇಡಿಗಳ ಕೃತ್ಯಕ್ಕೆ ಅವರು ಬೇಸರ ವ್ಯಕ್ತಪಡಿಸಿದರು.ಇನ್ನೂ ಮಹಾ ಸಿಎಂ ಪ್ರಧಾನಿ ನರೇಂದ್ರ ಮೋದಿಗೆ ಬರೆದಿರುವ ಪತ್ರಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಸರಿಯಾದ ಕ್ರಮ ಕೈಗೊಳ್ಳಲಿದ್ದಾರೆ ಅಂತ ಅವರು ಹೇಳಿದರು. ಇನ್ನೂ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಶಿವಸೇನ ಸರ್ಕಾರ ಮೈತ್ರಿಯಲ್ಲಿದ್ದು, ಈ ಬಗ್ಗೆ ಇಲ್ಲಿನ ಕಾಂಗ್ರೆಸ್ ನಾಯಕರು ಮಾತನಾಡಬೇಕು ಅಂತ ಅವರು ಆಗ್ರಹಿಸಿದರು.
ಈ ನಡುವೆ ಬೆಳಗಾವಿ ಜಿಲ್ಲೆಯ ಪೀರನವಾಡಿಯ ಅಗೋಳದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಶುಕ್ರವಾರ ರಾತ್ರಿಯಂದು ಕಿಡಿಗೇಡಿಗಳು ವಿರೂಪಗೊಳಿಸಿದ್ದರು. ಇದರಿಂದಾಗಿ ಇಂದು ಬೆಳಗಾವಿಯಲ್ಲಿ ಎಂಇಎಸ್ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದಾರೆ. ವಿರೂಪಗೊಳಿಸಲಾಗಿದ್ದಂತ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು, ಈ ಮೊದಲು ಸ್ಥಾಪಿಸಿದ್ದಂತ ಸ್ಥಳದಲ್ಲಿಯೇ ಮರು ಸ್ಥಾಪಿಸಲಾಗಿದೆ.ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಎಂಇಎಸ್ ಪುಂಡಾಟಿಕೆ ವಿರುದ್ಧ ಸಿಡಿದೆದ್ದಿದ್ದಾರೆ. ಕನ್ನಡಿಗರು ಪೀರನವಾಡಿಯ ಅನಗೋಳದಲ್ಲಿ ಎಂಇಎಸ್ ವಿರುದ್ಧ ಪ್ರತಿಭಟನೆ ನಡೆಸುತ್ತಾ, ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ವಿರೂಪಗೊಳಿಸಿದವರ ವಿರುದ್ಧ ಆಕ್ರೋಶದ ಕಿಚ್ಚು ಹೊರ ಹಾಕಿದ್ದಾರೆ. ಪೀರನವಾಡಿಯಲ್ಲಿ ಎಂಇಎಸ್ ವಿರುದ್ಧ ಮೆರವಣಿಗೆ ಪ್ರತಿಭಟನೆ ನಡೆಸಿದಂತ ಕರವೇ ಕಾರ್ಯಕರ್ತರು, ಅನಗೋಳದಲ್ಲಿನ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಮತ್ತೆ ಅದೇ ಸ್ಥಳದಲ್ಲಿ ಮರುಸ್ಥಾಪಿಸಿ, ಹಾಲಿನ ಅಭಿಷೇಕ ಮಾಡಿದರು. ಈ ಮೂಲಕ ಮತ್ತೆ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಅದೇ ಸ್ಥಳದಲ್ಲಿ ಪುನರ್ ಸ್ಥಾಪಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada