ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಬೈಕ್; ಕಾಲೇಜು ವಿದ್ಯಾರ್ಥಿ ದುರ್ಮರಣ

ಬೆಂಗಳೂರು: ತಂದೆ ಹಾಗೂ ಮಗ ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಕ್ಯಾಂಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಚುಂಚೇಗೌಡನ ಹೊಸಹಳ್ಳಿ ಬಳಿ ನಡೆದಿದೆ.ಅಂಬಲಗೆರೆ ನಿವಾಸಿ ವರುಣ್ (18) ಮೃತ ವಿದ್ಯಾರ್ಥಿ. ವರುಣ್ ತನ್ನ ತಂದೆಯ ಜತೆಯಲ್ಲಿ ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ. ಎದುರಿನಿಂದ ವೇಗವಾಗಿ ಬಂದ ಕ್ಯಾಂಟರ್ ಗೆ ಬೈಕ್ ಡಿಕ್ಕಿ ಹೊಡೆದಿದೆ.

 

ಬಸ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕ್ಯಾಂಟರ್ ಗೆ ಬೈಕ್ ಗುದ್ದಿದ್ದು, ಅಪಘಾತದ ರಭಸಕ್ಕೆ ವಿದ್ಯಾರ್ಥಿ ಹಾರಿ ಕೆಳಗೆ ಬಿದ್ದಿದ್ದಾನೆ. ಆತನ ಮೇಲೆಯೇ ಕ್ಯಾಂಟರ್ ಹರಿದು ಹೋಗಿದೆ ಎಂದು ತಿಳಿದುಬಂದಿದೆ. ದೊಡ್ಡಬೆಳವಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ರೊನಾಲ್ಡೊ ವಿರುದ್ಧ ಮೆಸ್ಸಿ ಚರ್ಚೆಯಲ್ಲಿ ಮಾತನಾಡಿದ ರಣವೀರ್ ಸಿಂಗ್, ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರ ಯಾರು ಎಂಬುದನ್ನು ಬಹಿರಂಗಪಡಿಸಿದ!

Mon Mar 14 , 2022
ಕ್ರಿಸ್ಟಿಯಾನೋ ರೊನಾಲ್ಡೊ ಮತ್ತು ಲಿಯೋನೆಲ್ ಮೆಸ್ಸಿ ಪ್ರಪಂಚದಾದ್ಯಂತದ ಫುಟ್ಬಾಲ್ ಅಭಿಮಾನಿಗಳನ್ನು ದೀರ್ಘಕಾಲ ವಿಭಜಿಸಿದ್ದಾರೆ. ಯಾವಾಗಲೂ ಒಂದು ಚರ್ಚೆ ನಡೆಯುತ್ತಿದೆ – ಮೆಸ್ಸಿ ಅಥವಾ ರೊನಾಲ್ಡೊ ಅವರಲ್ಲಿ ಯಾರು ಸಾರ್ವಕಾಲಿಕ ಶ್ರೇಷ್ಠರು (GOAT)? ಬಾಲಿವುಡ್ ಸೂಪರ್ ಸ್ಟಾರ್ ರಣವೀರ್ ಸಿಂಗ್ ಇತ್ತೀಚೆಗೆ ರೊನಾಲ್ಡೊ ವರ್ಸಸ್ ಮೆಸ್ಸಿ ಚರ್ಚೆಗೆ ತೆರೆದುಕೊಂಡಿದ್ದಾರೆ. 36 ವರ್ಷ ವಯಸ್ಸಿನವರು ಯುಕೆಯಲ್ಲಿ ಗಾಲಾ ಸಮಯವನ್ನು ಹೊಂದಿದ್ದಾರೆ. ಭಾರತದಲ್ಲಿ ಪ್ರೀಮಿಯರ್ ಲೀಗ್‌ನ ಮೊದಲ ಅಧಿಕೃತ ರಾಯಭಾರಿಯಾಗಿರುವ ಬಾಲಿವುಡ್ ಸೂಪರ್‌ಸ್ಟಾರ್ ಇತ್ತೀಚೆಗೆ […]

Advertisement

Wordpress Social Share Plugin powered by Ultimatelysocial