ರಾಜಧಾನಿ ಬೆಂಗಳೂರಿನಲ್ಲಿ ಇಂದು ಶುಕ್ರವಾರ ಬೆಳಗ್ಗೆಯಿಂದ ಮಳೆಯ ಆರ್ಭಟ ಕೊಂಚ ಕಡಿಮೆಯಾದರೂ ಇತರ ಹಲವು ಜಿಲ್ಲೆಗಳಲ್ಲಿ ಮುಂದುವರಿದಿದೆ. ಹಲವು ಕಡೆಗಳಲ್ಲಿ ನಿನ್ನೆ ಹಗಲು ಮತ್ತು ರಾತ್ರಿಯ ಮಳೆಗೆ ಹಲವು ಅವಾಂತರಗಳು ಸಂಭವಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇಲ್ಲಿ ಶಾಲೆಗಳಿಗೆ ಇಂದು ಕೂಡ ರಜೆ ನೀಡಲಾಗಿದೆ. ದಾವಣಗೆರೆ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಹ ಶಿಕ್ಷಣ ಸಂಸ್ಥೆಗಳಿಗೆ ಇಂದು ರಜೆ ನೀಡಲಾಗಿದೆ. ಹಾಸನ, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಒಟ್ಟು 16 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಬೆಳಗ್ಗೆ ಸೂರ್ಯನ ಕೃಪೆ ಬೆಂಗಳೂರು ನಗರದಲ್ಲಿ ಸ್ವಲ್ಪ ಮಟ್ಟಿಗೆ ಇದ್ದರೂ ಸಾಯಂಕಾಲ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇಂದು ಹುಬ್ಬಳ್ಳಿ-ಧಾರವಾಡಗಳಲ್ಲಿ ಬೆಳ್ಳಂಬೆಳಗ್ಗೆಯೇ ವಿಪರೀತ ಮಳೆ ಸುರಿಯುತ್ತಿದೆ. ಧಾರವಾಡದಲ್ಲಿ ಶಾಲಾ ಕಾಲೇಜುಗಳಿಗೆ ಇಂದು ಜಿಲ್ಲಾಡಳಿತ ರಜೆ ಘೋಷಿಸಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada