ಕಾಲೇಜಿಗೆ ಹಿಜಾಬ್​ ಧರಿಸಿ ಬಂದ ವಿದ್ಯಾರ್ಥಿನಿಯರು ಪ್ರಾಂಶುಪಾಲರು ಕಾಲೇಜಿನ ಗೇಟ್ ಬಳಿ ತಡೆದರು ̤

ಉಡುಪಿ: ಸರ್ಕಾರದ ಆದೇಶವಿದ್ದರೂ ಕಾಲೇಜಿಗೆ ಹಿಜಾಬ್​ ಧರಿಸಿ ಬಂದಿದ್ದರಿಂದ ವಿದ್ಯಾರ್ಥಿನಿಯರು ಮತ್ತು ಪ್ರಾಂಶುಪಾಲರ ನಡುವೆ ವಾಗ್ವಾದ ಉಂಟಾದ ಘಟನೆ ಕುಂದಾಪುರ ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ.ಹಿಜಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ತರಗತಿಗೆ ತೆರಳದಂತೆ ಪ್ರಾಂಶುಪಾಲರು ಕಾಲೇಜಿನ ಗೇಟ್ ಬಳಿ ತಡೆದರು.ಬಳಿಕ ಹಿಜಾಬ್ ಕಳಚಿ ಕ್ಲಾಸ್​ಗೆ ಬರುವಂತೆ ಸೂಚಿಸಿದರು.ಈ ವೇಳೆ ಗೇಟ್ ಬಳಿ ಪ್ರಾಂಶುಪಾಲರ ಜೊತೆ ವಾಗ್ವಾದಕ್ಕಿಳಿದ ವಿದ್ಯಾರ್ಥಿನಿಯರು ಸರ್ಕಾರದ ಆದೇಶದಲ್ಲಿ ಕುಂದಾಪುರ ಕಾಲೇಜು ಉಲ್ಲೇಖವಿಲ್ಲ ಎಂದು ವಾದಿಸಿದರು. ಆದರೆ, ಸರಕಾರ ಇಡೀ ರಾಜ್ಯಕ್ಕೆ ಸುತ್ತೋಲೆ ಹೊರಡಿಸಿದೆ ಎಂದು ಪ್ರಾಂಶುಪಾಲರು ಉತ್ತರಿಸಿದರು.ಇನ್ನೊಂದೆಡೆ ಕೇಸರಿ ಶಾ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

ಲು ತೊಡದೆ ಹಿಂದು ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದಾರೆ. ನಿನ್ನೆ ನೂರಾರು ವಿದ್ಯಾರ್ಥಿಗಳು ಕೇಸರಿ ಶಾಲು ತೊಟ್ಟು ಕಾಲೇಜಿಗೆ ಬಂದಿದ್ದರು. ಸದ್ಯ ಈ ವಿವಾದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಿಕ್ಕಾಟಕ್ಕೆ ಕಾರಣವಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಪಾಕಿಸ್ಥಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ!

Thu Feb 3 , 2022
ಇಸ್ಲಮಾಬಾದ್: ಹಿಂದೂ ಉದ್ಯಮಿಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ಘಟನೆ ಸೋಮವಾರ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.ಸಿಂಧ್‌ ನ ಘೋಟ್ಕಿ ಜಿಲ್ಲೆಯ ದಹರ್ಕಿ ಟೌನ್‌ನಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ.ಮೃತಪಟ್ಟವರನ್ನು ಸತಾನ್ ಲಾಲ್ ಎಂದು ಗುರುತಿಸಲಾಗಿದೆ.ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ದೌರ್ಜನ್ಯದ ಮುಂದುವರಿದ ಘಟನೆ ಇದಾಗಿದೆ. ಜನವರಿ 4 ರಂದು, ಸಿಂಧ್ ಪ್ರಾಂತ್ಯದ ಅನಾಜ್ ಮಂಡಿಯಲ್ಲಿ ಹಿಂದೂ ಉದ್ಯಮಿ ಸುನೀಲ್ ಕುಮಾರ್ ಅವರನ್ನು ಅಪರಿಚಿತ ಜನರು ಗುಂಡಿಕ್ಕಿ ಕೊಂದಿದ್ದರು.ಜನವರಿ […]

Advertisement

Wordpress Social Share Plugin powered by Ultimatelysocial