ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಭರ್ಜರಿ ಸಿದ್ಧತೆ

ಕೊಪ್ಪಳ: ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಭರ್ಜರಿ ಸಿದ್ಧತೆ ಆರಂಭಿಸಿರುವ ಆಡಳಿತಾರೂಢ ಬಿಜೆಪಿ, ವಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಮತಬೇಟೆಗಾಗಿ ಇನ್ನಿಲ್ಲದ ಕಸರತ್ತು ನಡೆಸಿವೆ. ಇದೀಗ ಹನುಮ ಜನ್ಮಭೂಮಿ ಅಂಜನಾದ್ರಿ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ.

ಆಗಸ್ಟ್ ತಿಂಗಳಲ್ಲಿ ನಡೆಯಲಿರುವ ಸಂತ ಸಮ್ಮೇಳನಕ್ಕೆ ಕಾಂಗ್ರೆಸ್ ನ ಹಿರಿಯ ನಾಯಕರಿಗೆ ಅಂಜನಾದ್ರಿ ಬೆಟ್ಟದ ಅರ್ಚಕ ವಿದ್ಯಾದಾಸ್ ಬಾಬಾ ಆಹ್ವಾನ ನೀಡಿದ್ದಾರೆ. ಸ್ಥಳೀಯ ಮುಖಂಡರ ಮನವಿ ಮೇರೆಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಲಾಗಿದೆ.

ಸ್ಥಳೀಯ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಹನುಮಮಾಲೆ ಧರಿಸಿದ್ದರು. ಇದೀಗ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಸಂತ ಸಮ್ಮೇಳನಕ್ಕೆ ಆಹ್ವಾನಿಸಲಾಗಿದೆ. ಈಗಾಗಲೇ ಬಿಜೆಪಿ ನಾಯಕರಿಂದ ಹನುಮ ಜಪ ಆರಂಭವಾಗಿದ್ದು, ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕರಿಂದಲೂ ಆಂಜನೇಯನ ಜಪ ಆರಂಭವಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಲಸಿಕೆ ಪಡೆಯುವಂತೆ ಒತ್ತಾಯಿಸಲಾಗುವುದಿಲ್ಲ, ಲಸಿಕೆ ನೀತಿ ನಿರಂಕುಶವಲ್ಲ - ಸುಪ್ರೀಂ ಕೋರ್ಟ್

Mon May 2 , 2022
ನವದೆಹಲಿ: ಕೋವಿಡ್ -19 ಲಸಿಕೆ ( Covid-19 vaccine ) ಕಡ್ಡಾಯಗಳು ಸಾಂವಿಧಾನಿಕವೇ ಎಂದು ಪ್ರಶ್ನಿಸುವ ಅರ್ಜಿಗಳ ಬಗ್ಗೆ ತನ್ನ ತೀರ್ಪನ್ನು ನೀಡಿದ ಸುಪ್ರೀಂ ಕೋರ್ಟ್, ಯಾವುದೇ ವ್ಯಕ್ತಿಯನ್ನು ಲಸಿಕೆ ಪಡೆಯಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಸೋಮವಾರ ಹೇಳಿದೆ. ಪ್ರಸ್ತುತ ಲಸಿಕೆ ನೀತಿಯನ್ನು ಅಸಮಂಜಸ ಮತ್ತು ಸ್ಪಷ್ಟವಾಗಿ ನಿರಂಕುಶ ಎಂದು ಹೇಳಲು ಸಾಧ್ಯವಿಲ್ಲ ಎಂದು ತಾನು ನಂಬುವುದಾಗಿ ನ್ಯಾಯಾಲಯ ಹೇಳಿದೆ. ಸರ್ಕಾರವು ನೀತಿಯನ್ನು ರಚಿಸಬಹುದು ಮತ್ತು ದೊಡ್ಡ ಸಾರ್ವಜನಿಕ ಒಳಿತಿಗಾಗಿ […]

Advertisement

Wordpress Social Share Plugin powered by Ultimatelysocial