ಚುನಾವಣೆ ಹೊತ್ತಲ್ಲೇ ಪಕ್ಷಾಂತರ ಪರ್ವ ಶುರುವಾಗಿದ್ದು, ಪಕ್ಷೇತೇರ ಶಾಸಕ ಹೆಚ್. ನಾಗೇಶ್ ಹಾಗೂ ಜೆಡಿಎಸ್ ಪಕ್ಷದ ನಾಯಕ ವೈಎಸ್ ವಿ ದತ್ತಾ ಅವರು ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ.ಜನವರಿ 14 ರಂದು ಶಾಸಕ ಹೆಚ್.ನಾಗೇಶ್, ವೈಎಸ್ ವಿ ದತ್ತಾ ಅವರು ಕೆಪಿಸಿಸಿ ಅಧ್ಯಕ್ಷ, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.ಹೆಚ್. ನಾಗೇಶ್ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಸೇರುವ ಅಂತಿಮ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಪಕ್ಷ ಸೇರಿದರೆ ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗುವ ನಿರೀಕ್ಷೆ ಇದೆ. ಇನ್ನು ಜೆಡಿಎಸ್ ನಾಯಕ ವೈಎಸ್ ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ.
https://play.google.com/store/apps/details?id=com.speed.newskannada