ಬೆಳಗಾವಿ: ‘ಮುಂಬರುವ ವಿಧಾನಪರಿಷತ್ ಪದವೀಧರರ ಮತ್ತು ಶಿಕ್ಷಕರ ಮತಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ಗೆ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಬೆಳಗಾವಿ ಹಾಗೂ ಚಿಕ್ಕೋಡಿ ಜಿಲ್ಲೆಗಳ ಮುಂಚೂಣಿ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.’ಆಕಾಂಕ್ಷಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಅಭ್ಯರ್ಥಿಯನ್ನು ಶಿಫಾರಸು ಮಾಡಲಾಗುವುದು’ ಎಂದರು.’ಬೆಳಗಾವಿ ಮತ್ತು ಘಟಪ್ರಭಾದಲ್ಲಿ ಬೆಳಗಾವಿ, ಚಿಕ್ಕೋಡಿ ಜಿಲ್ಲೆಗಳ ಮುಂಚೂಣಿ ಘಟಕದ ಪದಾಧಿಕಾರಿಗಳಿಗೆ ತರಬೇತಿ ನೀಡಲಾಗುತ್ತಿದೆ. ಎಲ್ಲ ಪದಾಧಿಕಾರಿಗಳೂ ತಪ್ಪದೆ ತರಬೇತಿ ಪಡದುಕೊಳ್ಳಬೇಕು’ ಎಂದು ಸಲಹೆ ನೀಡಿದರು.’ಜಿಲ್ಲೆಯಲ್ಲಿ ರಾಜಕೀಯವಾಗಿ ಬೆಳೆಯಲು ಸಾಕಷ್ಟು ಅವಕಾಶಗಳಿವೆ. ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಕ್ಷದ ಸಿದ್ದಾಂತಕ್ಕೆ ಬದ್ಧರಾಗಿ ಕೆಲಸ ಮಾಡಬೇಕು. ಮುಂಚೂಣಿ ಘಟಕದ ಪದಾಧಿಕಾರಿಗಳ ಮೇಲೆ ಜಾಸ್ತಿ ಜವಾಬ್ದಾರಿ ಇದ್ದು, ಅದನ್ನು ಸರಿಯಾಗಿ ನಿಭಾಯಿಸಬೇಕು’ ಎಂದು ಸೂಚಿಸದರು.’ಪಕ್ಷದ ಬೆಳವಣಿಗೆಗೆ ಶ್ರಮಿಸಿದ ಪದಾಧಿಕಾರಿಗಳನ್ನು ಗುರುತಿಸಿ, ಉನ್ನತ ಸ್ಥಾನಮಾನ ನೀಡಲಾಗುವುದು. ಜತೆಗೆ ಸಹಾಯ, ಸಹಕಾರ ನೀಡುತ್ತೇವೆ’ ಎಂದು ತಿಳಿಸಿದರು.ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಡಾ.ಅಂಜಲಿ ನಿಂಬಾಳ್ಕರ್, ಗಣೇಶ ಹುಕ್ಕೇರಿ, ಮುಖಂಡರಾದ ಪ್ರಕಾಶ ಹುಕ್ಕೇರಿ, ವೀರಕುಮಾರ ಪಾಟೀಲ, ಕಾಕಾಸಾಹೇಬ ಪಾಟೀಲ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ರಾಜು ಸೇಠ್, ಬೆಳಗಾವಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮಹಾವೀರ ಮೋಹಿತೆ ಪಾಲ್ಗೊಂಡಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada