ಕಾಂಗ್ರೆಸ್ ಮುಖಂಡ ಬಿ.ಸೋಮಶೇಖರ್ ಅವರ ಮೇಲೆ ಗುರುವಾರ ರಾತ್ರಿ ಹಲ್ಲೆ ನಡೆದಿದ್ದು ಮಾಜಿ ಸಚಿವ ಡಿ.ಸುಧಾಕರ್ ಬೆಂಬಲಿಗರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. . ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ ಅವರು ವೀಕ್ಷಣೆಗೆ ಧರ್ಮಪುರ ಗ್ರಾಮಕ್ಕೆ ಆಗಮಿಸಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದ್ದು ಗಾಯಾಳುಗಳು ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.ಕಾಂಗ್ರೆಸ್ ಮುಖಂಡ ಹಾಗೂ ಎಂಎಲ್ಸಿ ಪರಾಜಿತ ಅಭ್ಯರ್ಥಿ ಬಿ. ಸೋಮಶೇಖರ್ ಅವರನ್ನು ಕೊರಳು ಪಟ್ಟಿ ಹಿಡಿದು ಎಳೆದಾಡಿ, ಅವರ ಮೇಲೆ ಮಾಜಿ ಸಚಿವ ಡಿ ಸುಧಾಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಪುರ ಗ್ರಾಮದಲ್ಲಿ ಕೇಳಿ ಬಂದಿದೆ. ಇನ್ನು ಹಲ್ಲೆಗೊಳಗಾದವರು ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de…