ಕಾಂಗ್ರೆಸ್ ನಾಯಕ ಬಿ ಸೋಮಶೇಖರ್ ಕೊರಳ ಪಟ್ಟಿ ಹಿಡಿದು ಮಾಜಿ ಸಚಿವರ ಬೆಂಬಲಿಗರಿಂದ ಹಲ್ಲೆ: ಆರೋಪ

ಕಾಂಗ್ರೆಸ್ ಮುಖಂಡ ಬಿ.ಸೋಮಶೇಖರ್ ಅವರ ಮೇಲೆ ಗುರುವಾರ ರಾತ್ರಿ ಹಲ್ಲೆ ನಡೆದಿದ್ದು ಮಾಜಿ ಸಚಿವ ಡಿ.ಸುಧಾಕರ್ ಬೆಂಬಲಿಗರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. . ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ ಅವರು ವೀಕ್ಷಣೆಗೆ ಧರ್ಮಪುರ ಗ್ರಾಮಕ್ಕೆ ಆಗಮಿಸಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದ್ದು ಗಾಯಾಳುಗಳು ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.ಕಾಂಗ್ರೆಸ್ ಮುಖಂಡ ಹಾಗೂ ಎಂಎಲ್ಸಿ ಪರಾಜಿತ ಅಭ್ಯರ್ಥಿ ಬಿ. ಸೋಮಶೇಖರ್ ಅವರನ್ನು ಕೊರಳು ಪಟ್ಟಿ ಹಿಡಿದು ಎಳೆದಾಡಿ, ಅವರ ಮೇಲೆ ಮಾಜಿ ಸಚಿವ ಡಿ ಸುಧಾಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಪುರ ಗ್ರಾಮದಲ್ಲಿ ಕೇಳಿ ಬಂದಿದೆ. ಇನ್ನು ಹಲ್ಲೆಗೊಳಗಾದವರು ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಬೆಸ್ಕಾಂನಲ್ಲಿ ನಕಲಿ ದಾಖಲೆ ಸಲ್ಲಿಸಿ ಅನುಕಂಪದ ಹುದ್ದೆ ಪಡೆದ ವಂಚಕರ ಬಂಧನ.

Wed Dec 28 , 2022
ನಕಲಿ ದಾಖಲೆ ಸಲ್ಲಿಸಿ ಕೆಲಸಕ್ಕೆ ಸೇರಿದ್ದ ಜ್ಯೂನಿಯರ್‌ ಅಸಿಸ್ಟೆಂಟ್‌ ವೀರೇಶ್‌, ಅಸಿಸ್ಟೆಂಟ್‌ ರಘು ಕಿರಣ್‌, ಜ್ಯೂನಿಯರ್‌ ಅಸಿಸ್ಟೆಂಟ್‌ ಹರೀಶ್‌, ಜ್ಯೂನಿಯರ್‌ ಎಂಜಿನಿಯರ್‌ ಎಂ.ಆರ್‌ ಶಿವಪ್ರಸಾದ್‌ರನ್ನು ಬಂಧಿಸಲಾಗಿದೆ. ರಕ್ಷಿತ್‌ ಮತ್ತು ಕಾರ್ತಿಕ್‌ ಇವರೂ ಕೂಡ ನಕಲಿ ದಾಖಲೆಗಳ ಆಧಾರದ ಮೇಲೆ ಅನುಕಂಪದ ಆಧಾರದ ಹುದ್ದೆ ಪಡೆದಿದ್ದು, ಈಗ ತಲೆಮರೆಸಿಕೊಂಡಿದ್ದಾರೆ. ನಕಲಿ ಅನುಕಂಪದ ಆಧಾರದ ಮೇಲೆ ಹುದ್ದೆ ಪಡೆದವರು ಬಹುತೇಕ ಚಿತ್ರದುರ್ಗ ಮೂಲದವರಾಗಿದ್ದಾರೆ.ಚಿತ್ರದುರ್ಗ ಬೆಸ್ಕಾಂ ಉಪ ವಿಭಾಗದಲ್ಲಿ ನಕಲಿ ಅನುಕಂಪದ ದಾಖಲೆ ಸಲ್ಲಿಸಿ, […]

Advertisement

Wordpress Social Share Plugin powered by Ultimatelysocial