ತಮ್ಮ ಅವೈಜ್ಞಾನಿಕ ಆಡಳಿತದಿಂದ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವು ಮುಗ್ಗರಿಸಲಿದ್ದು,ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಎಂದು ಕೆಪಿಸಿಸಿ ರಾಜ್ಯ ಎಸ್.ಸಿ.ಘಟಕದ ಉಪಾಧ್ಯಕ್ಷ ನಲ್ಲೂರಹಳ್ಳಿ ನಾಗೇಶ್ ಅವರು ಹೇಳಿದರು. ಮಹದೇವಪುರ ಕ್ಷೇತ್ರದ ನಲ್ಲೂರಹಳ್ಳಿ ಸೇರಿದಂತೆ ವಿವಿಧೆಡೆ ಕಾಂಗ್ರೆಸ್ ಭರವಸೆಗಳ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಬಿಜೆಪಿ ಸರ್ಕಾರ ಕೇಂದ್ರ ಹಾಗೂ ರಾಜ್ಯದಲ್ಲಿ ಬೆಲೆಏರಿಕೆ ನಿಯಂತ್ರಿಸಲಾಗದೆ, ಕಾಂಗ್ರೆಸ್ ಪಕ್ಷದ ಮೇಲೆ ದೂರುಗಳನ್ನು ಹೇಳುತ್ತ ಕಾಲ ದೂಡುತ್ತಿದೆ, ಬಿಜೆಪಿ ಅವರ ಕಟ್ಟುಕಥೆಗಳಿಗೆ ರಾಜ್ಯದ ಪ್ರಜೆಗಳು ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವನ್ನು ತಿರಸ್ಕರಿಸುವ ಮೂಲಕ ತಕ್ಕಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.ಸದ್ಯಕ್ಕೆ ಬಿಜೆಪಿ ಯವರು ಮಾಡುತ್ತಿರುವ ಅನಾಹುತಗಳನ್ನು ಜನರು ತಿಳಿಯಬೇಕು, ದೇಶದ ಐಕ್ಯತೆ ಹಾಗೂ ದೇಶಕ್ಕಾಗಿ ಸೇವೆ ಸಲ್ಲಿಸಿದ್ದರನ್ನು ಸ್ಮರಿಸಬೇಕು ಆಮೂಲಕ ಬಿಜೆಪಿ ಪಕ್ಷಕ್ಕೆ ತಕ್ಕಪಾಠ ಕಲಿಸಬೇಕೆಂದು ಹೇಳಿದರು.ಕಾಂಗ್ರೆಸಿನ ಗ್ಯಾರಂಟಿಗಳಾದ ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೂ ಪ್ರತಿ ತಿಂಗಳು ೨೦೦ ಯೂನಿಟ್ ಉಚಿತ ವಿದ್ಯುತ್ ಹಾಗೂ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಗೃಹಿಣಿಯರಿಗೆ ಪ್ರತಿ ತಿಂಗಳು ೨೦೦೦ ರೂ ನೀಡುವುದನ್ನು ಮಹದೇವಪುರ ಕ್ಷೇತ್ರದ ವಿವಿಧ ಗ್ರಾಮಗಳ ಮನೆಗಳಿಗೆ ತೆರಳಿ ಗ್ಯಾರಂಟಿ ಕಾರ್ಡುಗಳನ್ನು ಹಂಚುವುದರ ಮೂಲಕ ಜನರಿಗೆ ತಿಳಿಸಿದರು.ಈ ಸಂದರ್ಭದಲ್ಲಿ ಕೆ.ಪಿಸಿಸಿ ಸದಸ್ಯ ಜಯರಾಮರೆಡ್ಡಿ,ಮುಖಂಡರಾದ ವೆಂಕಟರಾಮಯ್ಯ,ಅನಿತಾ,ನಾಗರಾಜ್, ಗೋವಿಂದರಾಜು ಇದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada