ಕುಕ್ಕರ್ ಬಾಂಬ್ ಸ್ಪೋಟ ಕೇಸ್.

ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿಮಂಗಳೂರು.ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಶಾರಿಕ್ ನನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಎನ್‌ಐಎ ಅಧಿಕಾರಿಗಳು ಮಂಗಳೂರಿನಲ್ಲಿ ಶಾರೀಕ್ನ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲಿನ ಹಲವು ಲಾಡ್ಜ್ಗಳಲ್ಲಿ ತಂಗಿದ್ದ ಶಾರೀಕ್ ಅಲ್ಲಿಗೆ ಕೊರಿಯರ್ ಮೂಲಕ ಬಾಂಬ್ ತಯಾರಿಸುವ ಸಾಮಾಗ್ರಿಗಳನ್ನು ತರಿಸಿಕೊಳ್ಳುತ್ತಿದ್ದ. ಆತ ಲಾಡ್ಜ್ ಬಿಟ್ಟು ಬಂದ ಬಳಿಕವೂ ಪಾರ್ಸೆಲ್ ಬರುತ್ತಿದ್ದು, ನಂತರ ಲಾಡ್ಜ್ ನವರು ಅವನಿಗೆ ತಲುಪಿಸುತ್ತಿದ್ದರು ಎನ್ನುವ ಶಾಕಿಂಗ್ ಮಾಹಿತಿ ರಿವೀಲ್ ಆಗಿದೆ. ವಿಚಾರಣೆ ಸಮಯದಲ್ಲಿ ಕೇರಳದ ಕೊಚ್ಚಿಯ ಆಲುವಾದ ಕೆಲವು ಲಾಡ್ಜ್ಗಳಲ್ಲಿ ಬಾಂಬ್ ತಯಾರಿಸುತ್ತಿದ್ದ ಎಂದು ಈತ ಬಾಯಿಬಿಟ್ಟಿದ್ದಾನೆ. ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಕುರಿತು ಎನ್ ಐ ಎ ತೀವ್ರ ತನಿಖೆ ನಡೆಸಿದ್ದು, ಹಲವು ಸ್ಪೋಟಕ ಮಾಹಿತಿ ಕಲೆಹಾಕುತ್ತಿದೆ.ಉಗ್ರ ಶಾರೀಕ್ನ ತನಿಖೆ ಮುಂದುವರಿಸಿದ ಎನ್‌ಐಎ ಅಧಿಕಾರಿಗಳಿಗೆ ಸ್ಫೋಟಕ ಮಾಹಿತಿಗಳು ಸಿಗುತ್ತಿದ್ದು, ಇತ್ತೀಚೆಗೆ ಶಾರಿಕ್ ಹಣದ ಮೂಲ ಜಾಲಾಡಿದ ಅಧಿಕಾರಿಗಳಿಗೆ ಶಾಕ್ ಆಗಿದ್ದು, ಹೆಚ್ಚಿನ ಹಣ ಡಾಲರ್ ಮೂಲಕ ಶಾರಿಕ್ ಅಕೌಂಟ್ಗೆ ಬರುತ್ತಿದ್ದ ದಾಖಲೆ ಸಿಕ್ಕಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಡಿಕೆಶಿ ಒಂದು ರೀತಿಯ ಪಕ್ಷಿಯಾಗಿದ್ದು ಅದು ನಿಜವಾಗಿಯೂ ವೇಗವಾಗಿ ಹಾರಬಲ್ಲದು.!

Sat Dec 17 , 2022
ಚುನಾವಣಾ ಹೊಸ್ತಿಲಲ್ಲಿ ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಇದೆ ಎನ್ನಲಾಗುತ್ತಿರುವ ಬಣ ರಾಜಕೀಯ ಹೈಕಮಾಂಡಿಗೆ ತಲೆನೋವಾಗಿ ಪರಿಣಮಿಸುತ್ತಿದೆ. ಇತ್ತೀಚೆಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರನ್ನು ಕರೆಸಿ ಮಾತನಾಡಿದ್ದರು. ಇದರಿಂದಾಗಿ, ಬೇರೆಬೇರೆಯಾಗಿ ಸಾಗಬೇಕಿದ್ದ ಇಬ್ಬರ ಯಾತ್ರೆಗಳಿಗೆ ಬ್ರೇಕ್ ಹಾಕಿರುವ ಹೈಕಮಾಂಡ್ ಜೊತೆಯಾಗಿ ರಾಜ್ಯ ಪ್ರವಾಸ ಮಾಡಿ ಎಂದು ಫರ್ಮಾನು ಹೊರಡಿಸಿದ್ದು ಗೊತ್ತೇ ಇದೆ. ಆದರೂ, ಇಬ್ಬರೂ ತಮ್ಮ ಸಮುದಾಯದ ನಾಯಕರ ಪ್ರತ್ಯೇಕ ಸಭೆ ನಡೆಯುವುದು ಮಾತ್ರ ನಿಂತಿಲ್ಲ. ಹಿರಿಯೂರಿನಲ್ಲಿ […]

Advertisement

Wordpress Social Share Plugin powered by Ultimatelysocial