ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕಡಿಮೆ ಪ್ರಮಾಣದಲ್ಲಿ ದಾಖಲಾಗಿದ್ದು, ಕಳೆದ 24 ಗಂಟೆಯಲ್ಲಿ 3,157 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕುಸಿತವಾಗಿದ್ದು, 24 ಗಂಟೆಯಲ್ಲಿ 26 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,23,869 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 19,500 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,723 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,38,976 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 4,02,170 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,89,23,98,347 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 2,95,588 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us:
Mon May 2 , 2022
ಯಾದಗಿರಿ: ಈದ್ ಉಲ್ ಫಿತ್ರ್ ಅಂಗವಾಗಿ ಭಾನುವಾರ ಗಾಂಧಿ ವೃತ್ತ, ಹತ್ತಿಕುಣಿ ಕ್ರಾಸ್ ತರಕಾರಿ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿತ್ತು. 30 ದಿನಗಳ ಉಪವಾಸ ಆಚರಿಸುವ ಮುಸ್ಲಿಮರು, ಹಬ್ಬದ ಖರೀದಿಯಲ್ಲಿ ತೊಡಗಿಸಿಕೊಂಡಿದ್ದರು. ಗಾಂಧಿ ವೃತ್ತದ ಮಾರುಕಟ್ಟೆ ಸಮೀಪ ತಳ್ಳುಗಾಡಿಗಳಲ್ಲಿ ಹಬ್ಬದ ವಸ್ತುಗಳನ್ನು ಖರೀದಿ ಮಾಡುವುದು ಕಂಡು ಬರುತ್ತಿದೆ. ಶೀರ್ ಖುರ್ಮಾ ತಯಾರಿಕೆಗಾಗಿ ಬಾದಾಮಿ, ಗೊಡಂಬಿ, ದ್ರಾಕ್ಷಿ, ಉತ್ತುತ್ತಿ, ಲವಂಗ, ಚಕ್ಕೆ, ಗಸಗಸೆ, ಅಕ್ರೋಟ್, ಒಣಖಜೂರು, ಪಿಸ್ತಾ ಸೇರಿದಂತೆ ಸಿಹಿ […]