ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 25,920 ಜನರಲ್ಲಿ ಸೋಂಕು ಪತ್ತೆಯಾಗಿದೆ

 

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 25,920 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮೂರನೇ ಅಲೆಯಲ್ಲಿ ಜನರು ನಿಟ್ಟುಸಿರುಬಿಡುವಂತಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 492 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,10,905 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 292092 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 66,254 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,19,77,238 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 37,86,806 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,74,64,99,461 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 12,54,893 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮನೆಯಲ್ಲಿಯೇ ದೊರೆಯುವ ನಿಸರ್ಗದತ್ತವಾದ ಎಲೆಗಳನ್ನು ಬಳಸಿ ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡಿಕೊಳ್ಳಬಹುದು.

Fri Feb 18 , 2022
ಸಾಮಾನ್ಯವಾಗಿ ಆರೋಗ್ಯ ಮತ್ತು ಸೌಂದರ್ಯವನ್ನು ರಕ್ಷಿಸಿಕೊಳ್ಳಲು ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕಯುಕ್ತವಾದ ಕ್ರೀಮ್ ಗಳ ಮೊರೆ ಹೋಗುತ್ತೇವೆ. ಆದರೆ ಮನೆಯಲ್ಲಿಯೇ ದೊರೆಯುವ ನಿಸರ್ಗದತ್ತವಾದ ಎಲೆಗಳನ್ನು ಬಳಸಿ ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡಿಕೊಳ್ಳಬಹುದು.ಮುಖದ ಮೇಲೆ ಮೊಡವೆಗಳ ಕಾಟದಿಂದ ಒದ್ದಾಡುವವರು ತುಳಸಿ ಎಲೆಗಳನ್ನು ಜಜ್ಜಿ ರಸ ಹಿಂಡಿ ಪ್ರತಿದಿನ ಮುಖಕ್ಕೆ ಸವರಿಕೊಳ್ಳುತ್ತಿದ್ದರೆ ಎರಡು ತಿಂಗಳಲ್ಲಿ ಮೊಡವೆಗಳ ಕಾಟ ನಿವಾರಣೆಯಾಗುತ್ತದೆ.ಈ ಎಲೆಗಳನ್ನು ಒಣಗಿಸಿ ಪುಡಿ ಮಾಡಿಟ್ಟುಕೊಳ್ಳಬೇಕು. ಈ ಪುಡಿಗಳ ಮಿಶ್ರಣಕ್ಕೆ ಜೇನು, ನಿಂಬೆರಸ ಬೆರೆಸಿ ಮುಖಕ್ಕೆ […]

Advertisement

Wordpress Social Share Plugin powered by Ultimatelysocial