ಆಳಂದ ಪಟ್ಟಣದಲ್ಲಿರುವ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಕೋರ್ಟ್ ಅನುಮತಿ ನೀಡಲಾಗಿದೆ.

 

ಲಬುರಗಿ : ಕಲಬುರಗಿ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಕೋರ್ಟ್‌ ಅನುಮತಿ ನೀಡಿದ ನಿಟ್ಟಿನಲ್ಲಿ ಇಂದು ಪಟ್ಟಣಕ್ಕೆ ಖುದ್ದು ಎಡಿಜಿಪಿ ಅಲೋಕ್ ಕುಮಾರ್  ಭದ್ರತೆ ಪರಿಶೀಲಿಸಿದ್ದಾರೆ.

ಆಳಂದ ಪಟ್ಟಣದಲ್ಲಿರುವ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಕೋರ್ಟ್ ಅನುಮತಿ ನೀಡಲಾಗಿದೆ. ಹೀಗಾಗಿ ಇಂದು ದರ್ಗಾದಲ್ಲಿರೋ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿ ಹಬ್ಬದ ದಿನ ಪೂಜೆ ಪುನಸ್ಕಾರ ನಡೆಸಲಾಗುತ್ತದೆ. ಇಷ್ಟೇ ಅಲ್ಲದೇ ಕಲಬುರಗಿ ನಗರದ ರಾಮಮಂದಿರದಲ್ಲಿ ಹೋಮ, ಹವನ ಮತ್ತು ಶಿವಮಾಲೆಯನ್ನು ಧರಿಸುವ ಪ್ರಕ್ರಿಯೆ ಚುರುಕುಗೊಂಡಿದೆ. ಅದೇ ವೇಳೆ ದರ್ಗಾದಲ್ಲಿ ಉರೂಸ್ ನಡೆಸಲಿದ್ದು ಮತ್ತೊಂದು ಕುತೂಹಲಕ್ಕೆ ಕಾರಣವಾಗಿದೆ.

ಕಳೆದ ವರ್ಷ ಶಿವರಾತ್ರಿಯಂದು ಪೂಜೆ ಸಮಯದಲ್ಲಿ ದೊಡ್ಡ ಮಟ್ಟದ ಘರ್ಷಣೆ ನಡೆದಿತ್ತು ಈ ಕಾರಣದಿಂದಾಗಿ ಇಂದು ಕಲಬುರಗಿ ದರ್ಗಾ ಸುತ್ತಮುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ವಹಿಸಲಾಗಿದ್ದು. ಖುದ್ದು ಎಡಿಜಿಪಿ ಅಲೋಕ್ ಕುಮಾರ್ ಭದ್ರತೆ ಪರಿಶೀಲನೆ ನಡೆಸಲಿದ್ದಾರೆ. ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಪೊಲೀಸರ ಪಥಸಂಚನಜತೆಗೆ ಬಿಗಿ ಬಂದೋಬಸ್ತ್ ಕೈಗೊಳ್ಳುತ್ತಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಹುತೇಕ ಕಂಪನಿಗಳು ತಮ್ಮ ಉದ್ಯೋಗಿಗಳು ನಿಗದಿತ ಅವಧಿಯನ್ನೂ ಮೀರಿ ಕೆಲಸ ಮಾಡಬೇಕೆಂದು ಬಯಸುತ್ತವೆ.

Thu Feb 16 , 2023
ಬಹುತೇಕ ಕಂಪನಿಗಳು ತಮ್ಮ ಉದ್ಯೋಗಿಗಳು ನಿಗದಿತ ಅವಧಿಯನ್ನೂ ಮೀರಿ ಕೆಲಸ ಮಾಡಬೇಕೆಂದು ಬಯಸುತ್ತವೆ. ಹೀಗಾಗಿ ಇಂತಹ ಕಂಪನಿಗಳ ಉದ್ಯೋಗಿಗಳು ಸದಾಕಾಲ ಒತ್ತಡದಲ್ಲಿ ಇರುತ್ತಾರೆ. ಇಂಥದರ ನಡುವೆ ಕಂಪನಿಯೊಂದರ ಪೋಸ್ಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಇಂದೋರ್ ಮೂಲದ ಸಾಫ್ಟ್ ಗ್ರಿಡ್ ಕಂಪ್ಯೂಟರ್ಸ್ ತನ್ನ ಉದ್ಯೋಗಿಗಳು ನಿಗದಿತ ಅವಧಿಯವರೆಗೆ ಮಾತ್ರ ಕೆಲಸ ಮಾಡಬೇಕೆಂದು ಬಯಸುತ್ತದೆ. ಅಷ್ಟೇ ಅಲ್ಲ, ಇದನ್ನು ಮೀರಿ ಉದ್ಯೋಗಿಗಳು ಕೆಲಸದಲ್ಲಿ ತೊಡಗಿಕೊಂಡಿದ್ದರೆ ಅವರ ಕಂಪ್ಯೂಟರ್ಗೆ ನಿಮ್ಮ ಶಿಫ್ಟ್ ಮುಗಿದಿದೆ. […]

Advertisement

Wordpress Social Share Plugin powered by Ultimatelysocial