ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದ ವಿಧಾನಪರಿಷತ್ ಸದಸ್ಯ ಬೋಜೆಗೌಡ ಅವರಿಗೆ ಜೋಶಿ ಪರ ವಕೀಲರು ನೋಟಿಸ್ ಜಾರಿ ಮಾಡಿದ್ದು ಏಳು ದಿನಗಳಲ್ಲಿ ಉತ್ತರಿಸುವಂತೆ ನೋಟಿಸ್ ನಲ್ಲಿ ತಿಳಿಸಿದ್ದಾರೆ.ಭಾರತೀಯ ವೈದ್ಯಕೀಯ ಮಂಡಳಿಗೆ ನೇಮಕಾತಿ ವಿಚಾರದಲ್ಲಿ 2 ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಬೋಜೆಗೌಡ ಅವರು ಆರೋಪ ಮಾಡಿದ್ದರು.ಬೋಜೆಗೌಡರ ಆರೋಪಕ್ಕೆ ಸಂಬಂಧಿಸಿದಂತೆ ಪ್ರಹ್ಲಾದ್ ಜೋಶಿ ಪರ ವಕೀಲರಾದ ಅರುಣ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಬೋಜೆಗೌಡರ ಆರೋಪ ಆಧಾರ ರಹಿತವಾಗಿದೆ ಅಂತಾ ಕೇಂದ್ರ ಸಚಿವರು ಪ್ರತಿಕ್ರಿಯೆ ಕೊಟ್ಟಿದ್ದರು. ಅಲ್ಲದೇ ಅವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದೂ ಹೇಳಿದ್ದರು. ಇದೀಗ ಕೇಂದ್ರ ಸಚಿವ ಜೋಶಿ ಅವರ ಕೋರಿಕೆ ಮೇರೆಗೆ ಬೋಜೆಗೌಡರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು 40ವರ್ಷಗಳಿಂದ ಸಾಮಾಜಿಕ ಸೇವೆ ಹಾಗೂ ರಾಜಕೀಯದಲ್ಲಿರುವ ಜೋಶಿ ಅವರ ಮೇಲೆ ಬೋಜೆಗೌಡರು ಆಧಾರ ರಹಿತ ಆರೋಪ ಮಾಡಿದ್ದಾರೆ. ನೋಟಿಸ್ ಕೊಟ್ಟ 7ದಿನಗಳಲ್ಲಿ ಬೋಜೆಗೌಡ ಅವರ ತಮ್ಮ ಹೇಳಿಕೆಯನ್ನು ವಾಪಸ್ ಪಡೆದುಕೊಂಡು ಕ್ಷಮೆ ಕೇಳಬೇಕು. ಒಂದು ವೇಳೆ ಅವರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಿದ್ದಾರೆ. ಹೀಗಾಗಿ ಬೋಜೆಗೌಡರ ಚಿಕ್ಕಮಗಳೂರು ಮನೆ ವಿಳಾಸಕ್ಕೆ ಈಗಾಗಲೇ ನೋಟಿಸ್ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada