7ದಿನದಲ್ಲಿ ಹೇಳಿಕೆ ವಾಪಸ್ ಪಡೆದು ಕ್ಷಮೆ ಕೇಳುವಂತೆ ವಿಪ ಸದಸ್ಯ ಬೋಜೆಗೌಡರಿಗೆ ನೋಟಿಸ್.

 

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದ ವಿಧಾನಪರಿಷತ್ ಸದಸ್ಯ ಬೋಜೆಗೌಡ ಅವರಿಗೆ ಜೋಶಿ ಪರ ವಕೀಲರು ನೋಟಿಸ್ ಜಾರಿ ಮಾಡಿದ್ದು ಏಳು ದಿನಗಳಲ್ಲಿ ಉತ್ತರಿಸುವಂತೆ ನೋಟಿಸ್ ನಲ್ಲಿ ತಿಳಿಸಿದ್ದಾರೆ.ಭಾರತೀಯ ವೈದ್ಯಕೀಯ ಮಂಡಳಿಗೆ ನೇಮಕಾತಿ ವಿಚಾರದಲ್ಲಿ 2 ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಬೋಜೆಗೌಡ ಅವರು ಆರೋಪ ಮಾಡಿದ್ದರು.ಬೋಜೆಗೌಡರ ಆರೋಪಕ್ಕೆ ಸಂಬಂಧಿಸಿದಂತೆ ಪ್ರಹ್ಲಾದ್ ಜೋಶಿ ಪರ ವಕೀಲರಾದ ಅರುಣ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಬೋಜೆಗೌಡರ ಆರೋಪ ಆಧಾರ ರಹಿತವಾಗಿದೆ ಅಂತಾ ಕೇಂದ್ರ ಸಚಿವರು ಪ್ರತಿಕ್ರಿಯೆ ಕೊಟ್ಟಿದ್ದರು. ಅಲ್ಲದೇ ಅವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದೂ ಹೇಳಿದ್ದರು. ಇದೀಗ ಕೇಂದ್ರ ಸಚಿವ ಜೋಶಿ ಅವರ ಕೋರಿಕೆ ಮೇರೆಗೆ ಬೋಜೆಗೌಡರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು 40ವರ್ಷಗಳಿಂದ ಸಾಮಾಜಿಕ ಸೇವೆ ಹಾಗೂ ರಾಜಕೀಯದಲ್ಲಿರುವ ಜೋಶಿ ಅವರ ಮೇಲೆ ಬೋಜೆಗೌಡರು ಆಧಾರ ರಹಿತ ಆರೋಪ ಮಾಡಿದ್ದಾರೆ. ನೋಟಿಸ್ ಕೊಟ್ಟ 7ದಿನಗಳಲ್ಲಿ ಬೋಜೆಗೌಡ ಅವರ ತಮ್ಮ ಹೇಳಿಕೆಯನ್ನು ವಾಪಸ್ ಪಡೆದುಕೊಂಡು ಕ್ಷಮೆ ಕೇಳಬೇಕು. ಒಂದು ವೇಳೆ ಅವರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಿದ್ದಾರೆ. ಹೀಗಾಗಿ ಬೋಜೆಗೌಡರ ಚಿಕ್ಕಮಗಳೂರು ಮನೆ ವಿಳಾಸಕ್ಕೆ ಈಗಾಗಲೇ ನೋಟಿಸ್ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಿರಿಯೂರು ಜೆಡಿಎಸ್‌ ಅಭ್ಯರ್ಥಿ ಅಂತಿಮ: ಎಚ್‌.ಡಿ ರೇವಣ್ಣ ಆಪ್ತನಿಗೆ ಟಿಕೆಟ್!

Thu Mar 2 , 2023
ಚಿತ್ರದುರ್ಗ, ಮಾರ್ಚ್ 1: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ವಿವಿಧ ರಾಜಕೀಯ ಪಕ್ಷಗಳಲ್ಲಿ ಚುನಾವಣೆಯ ಕಾವು ರಂಗೇರುತ್ತಿದೆ. ದುಡ್ಡು ಇದ್ದರೆ ಹೊರಗಿನವರು ಯಾರು ಬೇಕಾದರೂ ಬಂದು ಸ್ಪರ್ಧಿಸಿ ಹಿರಿಯೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಬಹುದು ಎಂಬ ಹಣೆ ಪಟ್ಟಿಯನ್ನು ಹಿರಿಯೂರು ಕ್ಷೇತ್ರ ಕಟ್ಟಿಕೊಂಡಿದೆ. ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಭರ್ಜರಿ ಪ್ರಚಾರ ಕೈಗೊಂಡಿವೆ. ಜೆಡಿಎಸ್‌ನಲ್ಲಿ ಆಕಾಂಕ್ಷಿಗಳ ಪಟ್ಟಿ ಹೆಚ್ಚು ಇದ್ದರಿಂದ ಟಿಕೆಟ್ ಘೋಷಣೆಯಾಗಿರಲಿಲ್ಲ. ಇದೀಗ ನಿವೃತ್ತ ಮುಖ್ಯ ಇಂಜಿನಿಯರ್ […]

Advertisement

Wordpress Social Share Plugin powered by Ultimatelysocial