ರಾಜ್ಯದಲ್ಲಿ ಮತ್ತೆ ಮಹಾಮಾರಿ ಕೊರೋನಾ ಆತಂಕ ಶುರುವಾಗಿದ್ದು, ರಾಜ್ಯದಲ್ಲಿ ಇಂದು 2298 ಕೊರೋನಾ ಕೇಸ್ ದಾಖಲಾಗಿವೆ. ಇಂದು 2298 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 975,955ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ ಬುಲೆಟಿನ್ನಿಂದ ತಿಳಿದು ಬಂದಿದೆ.
ಇಂದಿನ 24/03/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/dvTqxHRxBp @mla_sudhakar @Comm_dhfwka @MDNHM_Kar @KarnatakaVarthe @PIBBengaluru @CovidKarnataka pic.twitter.com/nB7oSaVeJA
— K'taka Health Dept (@DHFWKA) March 24, 2021
ಕಿಲ್ಲರ್ ಕೊರೋನಾ ಸೋಂಕಿಗೆ ರಾಜ್ಯದಲ್ಲಿ ಇಂದು 12 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 12,461 ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 995 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,46,589 ಜನ ಗುಣಮುಖರಾಗಿ ಡಿಸ್ಸಾರ್ಜ್ ಆಗಿದ್ದಾರೆ.ರಾಜ್ಯದಲ್ಲಿ ಸದ್ಯ 16,886 ಸಕ್ರಿಯ ಪ್ರಕರಣಗಳಿದ್ದು, 143 ಜನ ಐಸಿಯುನಲ್ಲಿಚಿಕಿತ್ಸೆ ಪಡೆಯುತ್ತಿದ್ದಾರೆ.ಬೆಂಗಳೂರಿನಲ್ಲಿ ಇಂದು 1,398 ಜನರಿಗೆ ಸೋಂಕು ತಗಲಿದ್ದು, ಇಂದು 7 ಮಂದಿ ಮೃತಪಟ್ಟಿದ್ದಾರೆ