ಟೀಂ ಇಂಡಿಯಾಗೆ ಬಿಗ್ ಶಾಕ್.

 

ಕೆಎನ್‌ಎನ್ಡಿಜಿಟಲ್ ಡೆಸ್ಕ್ : ಟೀಂ ಇಂಡಿಯಾಗೆ ಶಾಕ್ ಎದುರಾಗಿದ್ದು, ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಿಂದ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

ಅದ್ರಂತೆ, ಬುಮ್ರಾ ಫಿಟ್ನೆಸ್ ಕಾರಣದಿಂದಾಗಿ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ.

ಕುತೂಹಲಕಾರಿ ಸಂಗತಿಯೆಂದರೆ, ಕಳೆದ ವಾರವಷ್ಟೇ ಅವರಿಗೆ ಏಕದಿನ ತಂಡದಲ್ಲಿ ಸ್ಥಾನ ನೀಡಲಾಗಿತ್ತು. ಆದ್ರೆ, ಸಧ್ಯ ಬಿಸಿಸಿಐ ಅವರೊಂದಿಗೆ ‘ಆತುರ ಪಡಲು’ ಬಯಸುವುದಿಲ್ಲ, ಈ ಕಾರಣದಿಂದಾಗಿ ಅವರನ್ನ ಸರಣಿಯಿಂದ ಹೊರಗಿಡಲಾಗಿದೆ ಎಂದು ಯು ಟರ್ನ್ ಹೊಡೆದಿದೆ.

29 ವರ್ಷದ ಆಟಗಾರ ಸೆಪ್ಟೆಂಬರ್ ಅಂತ್ಯದಿಂದ ತಂಡದಿಂದ ಹೊರಗುಳಿದಿದ್ದು, ಇನ್ನು 2022ರ ಏಷ್ಯಾ ಕಪ್ನಿಂದ ಹೊರಗುಳಿದಿದ್ದರು. ಆಸ್ಟ್ರೇಲಿಯಾ ವಿರುದ್ಧದ ತವರಿನ ಸರಣಿಯಲ್ಲಿ ಬುಮ್ರಾ ಮರಳಿದ್ದರೂ, ಮತ್ತೊಮ್ಮೆ ಗಾಯಗೊಂಡು ಟಿ20 ವಿಶ್ವಕಪ್ನಿಂದ ಹೊರಗುಳಿದಿದ್ದರು. ಈ ಪಂದ್ಯಾವಳಿಗಳಲ್ಲಿ ಭಾರತ ತಂಡವು ಬುಮ್ರಾ ಅವರನ್ನ ಕಳೆದುಕೊಂಡಿತು. ಜನವರಿ 10ರಿಂದ ಪ್ರಾರಂಭವಾಗುವ ಏಕದಿನ ಸರಣಿಗೆ ಅವರನ್ನು ಏಕದಿನ ತಂಡಕ್ಕೆ ಆಯ್ಕೆ ಮಾಡಲಾಯಿತು. ಆದರೆ ಸುದ್ದಿ ಸಂಸ್ಥೆ ಪಿಟಿಐ ವರದಿಯ ಪ್ರಕಾರ, ಅವರು ಈಗ ಈ ಸರಣಿಯಿಂದ ಹೊರಗುಳಿದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಫ್ಯಾನ್ಸ್ ಟಾರ್ಗೆಟ್ ರೀಚ್ ಆದ್ರಾ?

Mon Jan 9 , 2023
‘ಕ್ರಾಂತಿ’ ಸಿನಿಮಾ ಟ್ರೈಲರ್ ರಿಲೀಸ್ ಆಗಿ 24 ಗಂಟೆ ಕಳೆದಿದೆ. ಆಕ್ಷನ್ ಪ್ಯಾಕ್ಡ್ ಟ್ರೈಲರ್‌ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು ಅಭಿಮಾನಿಗಳು ಸೂಪರ್ ಹಿಟ್ ಮಾಡಿದ್ದಾರೆ. ಅಭಿಮಾನಿಗಳು ಟಾರ್ಗೆಟ್ ರೀಚ್ ಆದ್ರಾ? ಯಾವೆಲ್ಲಾ ದಾಖಲೆಗಳು ಧೂಳಿಪಟ ಆಯಿತು ಇನ್ನುವುದರ ಮಾಹಿತಿ ಈಗ ಸಿಕ್ಕಿದೆ.ವಿ. ಹರಿಕೃಷ್ಣ ನಿರ್ದೇಶನದ ಆಕ್ಷನ್ ಎಂಟರ್‌ಟೈನರ್ ಸಿನಿಮಾ ‘ಕ್ರಾಂತಿ’. ಜನವರಿ 26ಕ್ಕೆ ಸಿನಿಮಾ ದೊಡ್ಡಮಟ್ಟದಲ್ಲಿ ರಿಲೀಸ್ ಆಗಲಿದೆ. ರಚಿತಾ ರಾಮ್, ರವಿಚಂದ್ರನ್, ಉಮಾಶ್ರೀ, ಸುಮಲತಾ ಅಂಬರೀಶ್ ಸೇರಿದಂತೆ ದೊಡ್ಡ […]

Advertisement

Wordpress Social Share Plugin powered by Ultimatelysocial