ರಣಜಿ ಟ್ರೋಫಿಯಲ್ಲಿ ಮತ್ತೊಂದು ಶತಕ ಸಿಡಿಸಿದ ಸರ್ಫರಾಜ್.

ಹೊಸದಿಲ್ಲಿ: ಆಸ್ಟ್ರೆಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಇತ್ತೀಚೆಗೆ ಪ್ರಕಟವಾದ ತಂಡದಲ್ಲಿ ಸ್ಥಾನ ಪಡೆಯದೆ ನಿರಾಸೆ ಅನುಭವಿಸಿದ್ದ ಸರ್ಫರಾಜ್ ಖಾನ್ ಅವರು ಇಂದು ಮತ್ತೊಂದು ಶತಕ ಬಾರಿಸಿದ್ದಾರೆ. ಇದರೊಂದಿಗೆ ಆಯ್ಕೆ ಸಮಿತಿಗೆ ಮತ್ತೆ ತನ್ನ ನೆನಪು ಮೂಡಿಸಿದ್ದಾರೆ.

ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ಸರ್ಫರಾಜ್ ಖಾನ್ ಅವರು ಶತಕ ಸಿಡಿಸಿದ್ದಾರೆ.

ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಿಗೆ ಇತ್ತೀಚೆಗೆ ತಂಡ ಪ್ರಕಟಿಸಲಾಗಿತ್ತು. ಇದರಲ್ಲಿ ಸರ್ಫರಾಜ್ ಹೆಸರಿರಲಿಲ್ಲ. ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಇತ್ತಿಚಿನ ವರ್ಷಗಳಲ್ಲಿ ಅದ್ಭುತ ಪ್ರದರ್ಶನ ತೋರಿಸುತ್ತಿರುವ ಸರ್ಫರಾಜ್ ಖಾನ್ ಗೆ ಅವಕಾಶ ನೀಡದೆ ಇರುವುದು ಟೀಕೆಗೆ ಕಾರಣವಾಗಿದೆ. ಇದಾಗಿ ಕೆಲವೇ ದಿನಗಳಲ್ಲಿ ಸರ್ಫರಾಜ್ ಮತ್ತೊಂದು ಶತಕ ಹೊಡೆದಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರೆಬಲ್ ಸ್ಟಾರ್ ಹೆಸರಿಡಲು ವಾಣಿಜ್ಯ ಮಂಡಳಿ ಮನವಿ.

Tue Jan 17 , 2023
ಕನ್ನಡ ಚಿತ್ರರಂಗದ ಖ್ಯಾತ ನಟ, ಮಾಜಿ ಕೇಂದ್ರ ಸಚಿವ ಡಾ. ರೆಬೆಲ್ ಸ್ಟಾರ್ ಅಂಬರೀಷ್ ಅವರ ಹೆಸರನ್ನು ಆರ್.ಸಿ ಕಾಲೇಜು ವೃತ್ತದಿಂದ ಮೌರ್ಯ ವೃತ್ತ ಮತ್ತು ಆನಂದ್ ರಾವ್ ಸರ್ಕಲ್ ತನಕದ ರಸ್ತೆಗೆ ನಾಮಕರಣ ಮಾಡಬೇಕು ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ ಹರೀಶ್ ನೇತೃತ್ವದ ನಿಯೋಗ ಮಹಾನಗರ ಪಾಲಿಕೆ ಮುಖ್ಯ ಆಯುಕ್ತರಿಗೆ ಮನವಿ ಮಾಡಿದೆ.ಮಂಡಳಿ ಅಧ್ಯಕ್ಷ ಭಾ.ಮ ಹರೀಶ್ ನೇತೃತ್ವದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ […]

Advertisement

Wordpress Social Share Plugin powered by Ultimatelysocial