ಅಥಿಯಾ ಶೆಟ್ಟಿ-ಕೆ.ಎಲ್.ರಾಹುಲ್ ಮದುವೆ.

ವದೆಹಲಿ: ನಟಿ ಅಥಿಯಾ ಶೆಟ್ಟಿ ಮತ್ತು ಸ್ಟಾರ್ ಕ್ರಿಕೆಟರ್ ಕೆ.ಎಲ್.ರಾಹುಲ್ ಮದುವೆಯ ಕಾರ್ಯಕ್ರಮಗಳು ಪ್ರಾರಂಭವಾಗಿವೆ. ಬಾಲಿವುಡ್ ನಟ ಸುನೀಲ್ ಶೆಟ್ಟಿ ಮಗಳ ಮದುವೆ ಮಂಟಪ ಸಿಂಗಾರಗೊಂಡಿದ್ದು, ಮನೆಯಲ್ಲಿ ಮಂಗಳವಾದ್ಯ ಮೊಳಗಲಾರಂಭಿಸಿದೆ. ಏತನ್ಮಧ್ಯೆ, ಅತಿಯಾ ಶೆಟ್ಟಿ ಮತ್ತು ಕೆ.ಎಲ್.ರಾಹುಲ್ ಮದುವೆಯಲ್ಲಿ ನೋ ಫೋನ್ ನೀತಿ ಅನುಸರಿಸುವಂತೆ ಅತಿಥಿಗಳಿಗೆ ಮನವಿ ಮಾಡಿದ್ದಾರೆಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್‍ ಮದುವೆಯಂತೆಯೇ ಅಥಿಯಾ-ಕೆ.ಎಲ್.ರಾಹುಲ್ ಮದುವೆಯಲ್ಲೂ ಫೋನ್ ಬಳಕೆ ನಿಷೇಧಿಸಲಾಗಿದೆ.

ಅಥಿಯಾ-ರಾಹುಲ್ ಮದುವೆಯಲ್ಲಿ ಫೋಟೋ ಕ್ಲಿಕ್ಕಿಸುವಂತಿಲ್ಲ!

ವರದಿಗಳ ಪ್ರಕಾರ ,ಆಲಿಯಾ ಭಟ್-ರಣಬೀರ್ ಕಪೂರ್ ಮದುವೆಯಂತೆ, ಅಥಿಯಾ ಮತ್ತು ರಾಹುಲ್ ಮದುವೆಯಲ್ಲಿ ಅತಿಥಿಗಳು ಫೋನ್ ಬಳಕೆ ಮತ್ತು ಫೋಟೋ ಕ್ಲಿಕ್ಲಿಸುವಂತಿಲ್ಲ. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಬರುವ ಮುನ್ನವೇ ಅತಿಥಿಗಳ ಫೋನ್‌ಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಲಾಗುತ್ತಿದೆ. ಇದಲ್ಲದೆ ಅತಿಥಿಗಳು ಫೋಟೋಗಳು ಅಥವಾ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲು ಅನುಮತಿ ಇರುವುದಿಲ್ಲ. ಸುನೀಲ್ ಶೆಟ್ಟಿ ಮಗಳ ಮದುವೆಯಲ್ಲಿ ಮಾಧ್ಯಮದವರಿಗೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತಿದೆ. ಮದುವೆ ಬಗ್ಗೆ ಶೆಟ್ಟಿ ಕುಟುಂಬವಾಗಲಿ ಅಥವಾ ಕ್ರಿಕೆಟಿಗನ ಕುಟುಂಬವಾಗಲಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲವೆಂದು ತಿಳಿದುಬಂದಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್.

Sun Jan 22 , 2023
ಮೈಸೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪತ್ನಿ ವಿಜಯಲಕ್ಷ್ಮಿ ಹಾಗೂ ಮ್ಯಾನೇಜರ್ ನಾಗರಾಜ್ ವಿರುದ್ಧ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸಂರಕ್ಷಿತವೆಂದು ಗುರುತಿಸಲಾದ ಪಟ್ಟೆ ತಲೆ ಹೆಬ್ಬಾತುಗಳನ್ನು ಕೂಡಿಹಾಕಿ ಸಾಕಿದ ಆರೋಪದ ಮೇಲೆ ನಟ ದರ್ಶನ್, ಫಾರ್ಮ್ ಹೌಸ್ ಒಡತಿ ವಿಜಯಲಕ್ಷ್ಮಿ ಹಾಗೂ ಮ್ಯಾನೇಜರ್ ನಾಗರಾಜ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶುಕ್ರವಾರ ರಾತ್ರಿ ಅರಣ್ಯ ಇಲಾಖೆ ಅಧಿಕಾರಿಗಳು ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದ್ದಾರೆ. ಮಂಗೋಲಿಯಾ ಮೂಲದ […]

Advertisement

Wordpress Social Share Plugin powered by Ultimatelysocial