ಇಂಡಿಯಾ ಟೀಂ ವೇಗಿಗಳಿಗೆ ಧಮ್ಮಿಲ್ಲ: ಅಖ್ತರ್

ಟೀಂ ಇಂಡಿಯಾ ವೇಗಿಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ವೇಗದ ಬೌಲಿಂಗ್‌ನಲ್ಲಿ ಪಾಕಿಸ್ತಾನದ ವೇಗಿಗಳ ಪ್ರಾಬಲ್ಯದ ಬಗ್ಗೆ ಆಸೀಸ್ ಮಾಜಿ ವೇಗಿ ಬ್ರೆಟ್ ಲೀ ಜೊತೆ ಮಾತನಾಡುತ್ತಾ, ಭಾರತೀಯ ಆಹಾರ ಪದ್ಧತಿಗೆ ಬಗ್ಗೆ ಮಾತನಾಡಿದ್ದಾರೆ.ಇತ್ತೀಚಿನ ದಿನಗಳಲ್ಲಿ ಭಾರತದ ವೇಗಿಗಳು ಉತ್ತಮ ಪ್ರಗತಿ ಸಾಧಿಸಿದ್ದರೂ ಕೆಲವು ವಿಚಾರಗಳಲ್ಲಿ ಪಾಕ್ ವೇಗಿಗಳಿಗಿಂತ ತೀರಾ ಹಿಂದುಳಿದಿದ್ದಾರೆ ಎಂದರು.ಆದರೆ, ಪ್ರಸ್ತುತ ವಿಶ್ವ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ವೇಗಿಗಳ ಯೂನಿಟ್ ಮೀರಿದ ವೇಗದ ಬೌಲಿಂಗ್ ಪಡೆ ಯಾವ ತಂಡಕ್ಕೂ ಇಲ್ಲ ಎಂದರೆ ಅತಿಶಯೋಕ್ತಿಯಲ್ಲ. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಇಶಾಂತ್ ಶರ್ಮಾ, ಶಾರ್ದೂಲ್ ಠಾಕೂರ್, ನವದೀಪ್ ಸೈನಿ ಮತ್ತು ಟಿ ನಟರಾಜನ್ ಅವರಂತಹ ವೇಗಿಗಳೊಂದಿಗೆ ಭಾರತೀಯ ವೇಗದ ವಿಭಾಗವು ಕಾರ್ಯನಿರತವಾಗಿದೆ. ಈ ನಿಟ್ಟಿನಲ್ಲಿ ಇಂಗ್ಲೆಂಡ್, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ನ್ಯೂಜಿಲೆಂಡ್ ವೇಗಿಗಳಿಗಿಂತ ಭಾರತದ ವೇಗಿಗಳ ತಂಡ ಬಲಿಷ್ಠವಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನವದೆಹಲಿ: ಮೋದಿ ನೇತೃತ್ವದ ಸರ್ಕಾರದ 10 ನೇ ಬಜೆಟ್ ವಿಶೇಷತೆ ಬಗ್ಗೆ ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

Tue Feb 1 , 2022
ನವದೆಹಲಿ: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2022 -23 ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ.ನಾಲ್ಕನೇ ಬಾರಿಗೆ ಅವರು ಬಜೆಟ್ ಮಂಡನೆ ಮಾಡುತ್ತಿದ್ದಾರೆ.ಕಾಗದ ರಹಿತ ಬಜೆಟ್ಬಜೆಟ್ ಪ್ರತಿಯ ಸೂಟ್ ಕೇಸ್ ಬದಲು ಈ ಬಾರಿಯೂ ಟ್ಯಾಬ್ಲೆಟ್ ಸಂಪ್ರದಾಯ ಮುಂದುವರೆಸಲಾಗಿದೆ.90 ರಿಂದ 120 ನಿಮಿಷಗಳ ಕಾಲ ಬಜೆಟ್ ಮಂಡಿಸುವ ಸಾಧ್ಯತೆಯಿದೆ.2020ರಲ್ಲಿ ದಾಖಲೆಯ 160 ನಿಮಿಷ ಬಜೆಟ್ ಮಂಡಿಸಿದ್ದರು.2022 […]

Advertisement

Wordpress Social Share Plugin powered by Ultimatelysocial