ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನಲ್ಲಿ ಮನುಕಲಕುವ ಘಟನೆಯೊಂದು ನಡೆದಿದೆ. ನವಜಾತು ಗಂಡು ಶಿಶುವನ್ನು ಪ್ಲಾಸ್ಟಿಕ್ ಕವರನಲ್ಲಿ ಸುತ್ತಿ ತಬ್ಬಲಿ ಮಾಡಿ ಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಇನ್ನು ರಾತ್ರಿ ಯಾರು ಇಲ್ಲದ ವೇಳೆ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದು ಬಂದಿದೆ.
ಮಗು ಹುಟ್ಟಿದ ಸಂಗತಿಯನ್ನು ಮುಚ್ಚಿಡುವ ಉದ್ದೇಶದಿಂದ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಮೂರಗೋಡ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ತಕ್ಷಣವೇ ತನಿಖೆ ಮಾಡಿ ಅಪರಾಧಿಗಳನ್ನು ಪತ್ತೆ ಹಚ್ಚಬೇಕೆಂದು ಗ್ರಾಮದ ಕರವೇ ಹೋರಾಟಗಾರರು ಸುರೇಶ ಮುರಗೋಡ ಹಾಗು ಪರಶುರಾಮ ಶಿಂಗನವರ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ