ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಕಾರಣಕ್ಕೆ ಗಂಡನನ್ನು ಪತ್ನಿಯೇ ಕೊಲೆ ಮಾಡಿರುವ ಶ೦ಕೆ ಬೆಳಕಿಗೆ ಬಂದಿದೆ.
ಬೈಲಹೊಂಗಲ ತಾಲೂಕಿನ ಮರಕಟ್ಟಿ ಗ್ರಾಮದ ಮಹಿಳೆ, ಧಾರವಾಡ ಜಿಲ್ಲೆ ಹೋಗೂರ ಗ್ರಾಮದ ಪ್ರಿಯಕರ ಹಾಗೂ ಮತ್ತೊಬ್ಬನ ಸಹಕಾರದಿಂದ ತನ್ನ ಗಂಡ ರಮೇಶ್ (36) ಕೊಲೆ ಮಾಡಿಸಿದ್ದಾಳೆ. ಮೃತದೇಹವನ್ನು ಧಾರವಾಡ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ 4ರ ಸರ್ವಿಸ್ ರಸ್ತೆ ಚರಂಡಿ ಬಳಿ ಎಸೆದು ಪರಾರಿಯಾಗಿದ್ದರು.
ಕಿತ್ತೂರು ರಾಣಿಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada