ಯುವಕನ ಕೊಲೆಗೈದು ತಿರುಪತಿಯಲ್ಲಿ ಕೇಶ ಮುಂಡನ ಮಾಡಿಸಿಕೊಂಡ ಭೂಪರು!

 

ಬೆಂಗಳೂರು: ಹಳೇ ದ್ವೇಷಕ್ಕೆ ಯುವಕನೊಬ್ಬನನ್ನು ಅಪಹರಿಸಿ ಕೊಲೆಗೈದು ತಿರುಪತಿಗೆ ತೆರಳಿ ಕೇಶ ಮುಂಡನ ಮಾಡಿಸಿಕೊಂಡು ಬಂದ 7 ಮಂದಿ ಆರೋಪಿಗಳು ಬೊಮ್ಮನಹಳ್ಳಿ ಪೊಲೀಸರಿಗೆ ಶರಣಾಗಿದ್ದಾರೆ.

ಪ್ರಜ್ವಲ್‌, ಹಿಮಾದ್ರಿ, ಜೀವನ್‌, ರಾಕೇಶ್‌, ಅವಿನಾಶ್‌ ಹಾಗೂ ಸಾಗರ್‌ ಪೊಲೀಸರಿಗೆ ಶರಣಾದ ಆರೋಪಿಗಳು.

ಆರೋಪಿಗಳು ಮೇ 9ರಂದು ಬಿಟಿಎಂ ಲೇಔಟ್‌ 4ನೇ ಹಂತದ ಚಿಕ್ಕನಹಳ್ಳಿಯ ಸುಹಾಸ್‌ (19) ಎಂಬಾತನನ್ನು ಕೊಲೆಗೈದಿದ್ದರು ಎಂದು ಪೊಲೀಸರು ಹೇಳಿದರು.

ಬಿಟಿಎಂ ಲೇಔಟ್‌ನ ಪ್ರಭಾಕರ್‌ ಹಾಗೂ ಕವಿತಾ ದಂಪತಿಯ ಎರಡನೇ ಪುತ್ರ ಸುಹಾಸ್‌ ಹಾಗೂ ಆರೋಪಿ ಪ್ರಜ್ವಲ್‌ ನಡುವೆ ಯುಗಾದಿ ಹಬ್ಬದ ದಿನ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿತ್ತು. ಹೀಗಾಗಿ ಪ್ರಜ್ವಲ್‌, ಸುಹಾಸ್‌ ಮೇಲೆ ದ್ವೇಷ ಸಾಧಿಸುತ್ತಿದ್ದ ಮೇ 9ರಂದು ಸ್ನೇಹಿತನ ಮದುವೆ ಪಾರ್ಟಿಗೆ ಹೋಗುತಿದ್ದ ಸುಹಾಸ್‌ನನ್ನು ಪ್ರಜ್ವಲ್‌ ಹಾಗೂ ಸಹಚರರು ಆಟೋದಲ್ಲಿ ಅಪಹರಿಸಿದ್ದರು. ಬಳಿಕ ಎಲೆಕ್ಟ್ರಾನಿಕ್‌ ಸಿಟಿಯ ಬಸವನಪುರ ಸಮೀಪದ ನಿರ್ಜನ ಪ್ರದೇಶದಲ್ಲಿ ಚಾಕುವಿನಿಂದ ಇರಿದು ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿ ನೀಲಗಿರಿ ತೋಪಿನ ಬಳಿ ಮೃತದೇಹ ಬಿಸಾಡಿ ಹೋಗಿದ್ದರು.

ಇತ್ತ ಪುತ್ರ ಮನೆಗೆ ಬರದಿದ್ದಾಗ ಪೋಷಕರು ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸುಹಾಸ್‌ ಕೊಲೆಯಾಗಿರುವುದನ್ನು ಪತ್ತೆಹಚ್ಚಿದ್ದರು.

ತಿರುಪತಿಗೆ ಹೋಗಿದ್ದ ಆರೋ ಪಿಗಳು

ಕೊಲೆ ಮಾಡಿದ ಬಳಿಕ ಆರು ಮಂದಿ ಆರೋಪಿಗಳು ತಿರುಪತಿಗೆ ಹೋಗಿದ್ದರು. ಸಾಗರ್‌ ಮಾತ್ರ ಬೆಂಗಳೂರಲ್ಲೇ ತಲೆಮರೆಸಿಕೊಂಡಿದ್ದ. ಹೀಗಾಗಿ ಎರಡು ದಿನಗಳ ಹಿಂದೆ ಆತನನ್ನು ಪೊಲೀಸರು ಬಂಧಿಸಿದ್ದರು. ಈ ವಿಚಾರ ತಿಳಿದ ಇತರೆ 6 ಮಂದಿ ಆರೋಪಿಗಳು ತಿರುಪತಿಯಿಂದ ವಾಪಸ್‌ ಬಂದು ನೇರವಾಗಿ ಬೊಮ್ಮನಹಳ್ಳಿ ಪೊಲೀಸರು ಮುಂದೆ ಶರಣಾಗಿದ್ದಾರೆ. ಈ ವೇಳೆ ಹಳೇ ದ್ವೇಷಕ್ಕೆ ಕೊಲೆಗೈಯಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಕಸ್ತೂರಿ ಮಹಲ್'; ಭಯಪಡಿಸಲು ಶಾನ್ವಿ ರೆಡಿ!

Fri May 13 , 2022
ಈಗಾಗಲೇ ತನ್ನ ಟೈಟಲ್‌, ಪೋಸ್ಟರ್‌, ಟೀಸರ್‌, ಟ್ರೇಲರ್‌ ಮತ್ತು ಹಾಡುಗಳ ಮೂಲಕ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿರುವ “ಕಸ್ತೂರಿ ಮಹಲ್‌’ ಈ ವಾರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. “ಕಸ್ತೂರಿ ಮಹಲ್‌’ ಹಿರಿಯ ನಿರ್ದೇಶಕ ದಿನೇಶ್‌ ಬಾಬು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ 50ನೇ ಸಿನಿಮಾವಾಗಿದ್ದು, “ಅವನೇ ಶ್ರೀಮನ್ನಾರಾಯಣ’ ಸಿನಿಮಾದ ನಂತರ ನಟಿ ಶಾನ್ವಿ ಶ್ರೀವಾಸ್ತವ್‌ “ಕಸ್ತೂರಿ ಮಹಲ್‌’ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ರಂಗಾಯಣ ರಘು, ಸ್ಕಂದ ಅಶೋಕ್‌, ಶ್ರುತಿ […]

Advertisement

Wordpress Social Share Plugin powered by Ultimatelysocial