ಕೊಲೆ ಆರೋಪಿ ಕಾಲಿಗೆ ಗುಂಡೇಟು

ಬೆಳ್ಳಂಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಕೊಲೆ ಆರೋಪಿಯ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿ ಸಂತೋಷ್(21) ಕಾಲಿಗೆ ಗುಂಡು ತಗುಲಿದೆ. ರಾಜಗೋಪಾಲನಗರದ ಜಿ.ಕೆ. ಡಬ್ಲ್ಯೂ ಲೇಔಟ್ನಲ್ಲಿ ಫೈರಿಂಗ್ ನಡೆದಿದ್ದು, ಸಂತೋಷ್ ಅದೇ ಬಡಾವಣೆಯ ರೌಡಿಶೀಟರ್ ಆಗಿದ್ದ ಎಂದು ತಿಳಿದು ಬಂದಿದೆ. ಇದೇ ಜ. 9ರಂದು ಶ್ರೀನಿವಾಸ್ ಅಲಿಯಾಸ್ ಕರಿ ಸೀನನ ಕೊಲೆ ನಡೆದಿದ್ದು, ಸಂತೋಷ್ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ. ಹಾಡಹಹಗಲೇ ರಾಜಗೋಪಾಲನಗರದ ಕಸ್ತೂರಿ ನಗರದಲ್ಲಿ ಆರೋಪಿಗಳು ಹತ್ಯೆಗೈದಿದ್ದರು. ಕೊಲೆ ಪ್ರಕರಣದ ಆರೋಪಿ ಸಂತೋಷ್ ಬಂಧನಕ್ಕೆ ತೆರಳಿದ್ದ ವೇಳೆ ಫೈರಿಂಗ್ ನಡೆದಿದೆ. ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ಸಂತೋಷ್ ಕಾಲಿಗೆ ಗುಂಡು ಹಾರಿಸಲಾಗಿದೆ. ಪಿಎಸ್ಐ ಹನುಮಂತ ಹಾದಿಮನಿ ಅವರು ಗುಂಡು ಹಾರಿಸಿದ್ದಾರೆ.

ಇದನ್ನೂ ಓದಿ:ಡಾ.ರಾಜ್ ಕುಮಾರ್ ಅವರನ್ನ ಅಪಹರಿಸಿದ್ದ ನರಹಂತಕ

 

Please follow and like us:

Leave a Reply

Your email address will not be published. Required fields are marked *

Next Post

ರಾಷ್ಟ್ರೀಯ ಹೆದ್ದಾರಿಯಲ್ಲಿ ಜವರಾಯನ ಅಟ್ಟಹಾಸ,ಅಪಘಾತದಲ್ಲಿ ವ್ಯಕ್ತಿ ಸ್ಥಳದಲ್ಲೇ ಸಾವು

Tue Feb 9 , 2021
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದಾಟುವಾಗ ಅಪಘಾತವಾಗಿ ಓರ್ವ ವ್ಯಕ್ತಿ ಸಾವನ್ನಪಿರುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಾಗಳಾಗಿದ್ದು, ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಮಹ್ಮದ್ ಸಗೀರ್ (30) ಮೃತ ದುರ್ದೈವಿ.ಇನ್ನು ಈ ಪ್ರಕರಣವು ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇದನ್ನೂ ಓದಿ :ಕೊಲೆ ಆರೋಪಿ ಕಾಲಿಗೆ ಗುಂಡೇಟು Please follow and like us:

Advertisement

Wordpress Social Share Plugin powered by Ultimatelysocial