ಬೆಳ್ಳಂಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಕೊಲೆ ಆರೋಪಿಯ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿ ಸಂತೋಷ್(21) ಕಾಲಿಗೆ ಗುಂಡು ತಗುಲಿದೆ. ರಾಜಗೋಪಾಲನಗರದ ಜಿ.ಕೆ. ಡಬ್ಲ್ಯೂ ಲೇಔಟ್ನಲ್ಲಿ ಫೈರಿಂಗ್ ನಡೆದಿದ್ದು, ಸಂತೋಷ್ ಅದೇ ಬಡಾವಣೆಯ ರೌಡಿಶೀಟರ್ ಆಗಿದ್ದ ಎಂದು ತಿಳಿದು ಬಂದಿದೆ. ಇದೇ ಜ. 9ರಂದು ಶ್ರೀನಿವಾಸ್ ಅಲಿಯಾಸ್ ಕರಿ ಸೀನನ ಕೊಲೆ ನಡೆದಿದ್ದು, ಸಂತೋಷ್ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ. ಹಾಡಹಹಗಲೇ ರಾಜಗೋಪಾಲನಗರದ ಕಸ್ತೂರಿ ನಗರದಲ್ಲಿ ಆರೋಪಿಗಳು ಹತ್ಯೆಗೈದಿದ್ದರು. ಕೊಲೆ ಪ್ರಕರಣದ ಆರೋಪಿ ಸಂತೋಷ್ ಬಂಧನಕ್ಕೆ ತೆರಳಿದ್ದ ವೇಳೆ ಫೈರಿಂಗ್ ನಡೆದಿದೆ. ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ಸಂತೋಷ್ ಕಾಲಿಗೆ ಗುಂಡು ಹಾರಿಸಲಾಗಿದೆ. ಪಿಎಸ್ಐ ಹನುಮಂತ ಹಾದಿಮನಿ ಅವರು ಗುಂಡು ಹಾರಿಸಿದ್ದಾರೆ.
ಇದನ್ನೂ ಓದಿ:ಡಾ.ರಾಜ್ ಕುಮಾರ್ ಅವರನ್ನ ಅಪಹರಿಸಿದ್ದ ನರಹಂತಕ