ಜೀರಿಗೆ ನೀರಿನಲ್ಲಿದೆ ಈ ಆರೋಗ್ಯ ಲಾಭ.

ಲ್ಲಾ ರೀತಿಯ ರೋಗಗಳಿಗೂ ವೈದ್ಯರ ಬಳಿ ಓಡಬೇಕಿಲ್ಲ. ಕೆಲವೊಂದಕ್ಕೆ ಮನೆಯಲ್ಲೇ ಮದ್ದು ಮಾಡಿಕೊಳ್ಳಬಹುದು.ಗ್ಯಾಸ್ಟ್ರಿಕ್, ಅಜೀರ್ಣ, ಮಲಬದ್ದತೆ, ಬಾಯಿ ಹುಣ್ಣು, ಪಿತ್ತ ಸಂಬಂಧಿ ತಲೆನೋವು, ವಾಂತಿ- ಇದಕ್ಕೆಲ್ಲಾ ಮನೆಮದ್ದನ್ನೇ ಪ್ರಯತ್ನಿಸಬಹುದು.ಮನೆಯಲ್ಲಿ ಜೀರಿಗೆ ಇದ್ದರೆ ಸಾಕು.ಬಿಸಿಬಿಸಿ ನೀರಿಗೆ ಜೀರಿಗೆ ಹಾಕಿ, ಅದನ್ನು ಕುದಿಸಿ ಕುಡಿದರೆ ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳು ಶಮನವಾಗುತ್ತವೆ. ಜೀರ್ಣಕ್ರಿಯೆ ವೇಗವಾಗಿ ಆಗುತ್ತದೆ. ಆಗ ಯಾವ ಕಾಯಿಲೆಗಳೂ ಬರುವುದಿಲ್ಲ.ಜೀರಿಗೆಗೆ ರಕ್ತ ಶುದ್ದಿ ಮಾಡುವ ಶಕ್ತಿ ಇದೆ. ಬಾಯಿ ರುಚಿ ಕಳೆದುಕೊಂಡರೆ ಜೀರಿಗೆ ಕಷಾಯ ಮಾಡಿ, ಅದಕ್ಕೆ ಬೆಲ್ಲ ಬೆರೆಸಿ ಕುಡಿದು ನೋಡಿ. ಒಳಗಿರುವ ಜ್ವರ, ಅದರ ಲಕ್ಷಣಗಳ ಮೂಲ ಬೇರನ್ನು ಅಲ್ಲೇ ಚಿವುಟಿ ಹಾಕುತ್ತದೆ.ತಲೆನೋವು, ಸ್ವಲ್ಪ ಮೈ ಕೈ ನೋವಿದ್ದರೆ ಐದು ಗ್ಲಾಸ್ ನೀರಿಗೆ 6-8 ಚಮಚ ಜೀರಿಗೆ ಪುಡಿ ಹಾಕಿ, ಮೂರು ಚಮಚ ಮೆಣಸಿನ ಕಾಳು ಕುಟ್ಟಿ ಹಾಕಿ. ಒಣ ಶುಂಠಿ, ರುಚಿಗೆ ತಕ್ಕಷ್ಟು ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಿ. ದಿನಕ್ಕೆ ಮೂರು ಬಾರಿ ಕುಡಿದರೆ ತಲೆನೋವಿನ ಜೊತೆಗೆ ಜ್ವರ ಕೂಡ ನಿವಾರಣೆಯಾಗುತ್ತದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಗರ್ಭಿಣಿಯರು ಪಪ್ಪಾಯ ಹಣ್ಣು ತಿನ್ನುವುದು ಅಪಾಯಕಾರಿನಾ..?

Mon Feb 27 , 2023
ಗರ್ಭಿಣಿಯರು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಗರ್ಭಾವಸ್ಥೆ ತುಂಬಾ ಸೂಕ್ಷ್ಮವಾದ ಸಮಯವಾಗಿರುವುದರಿಂದ, ಸಣ್ಣ ತಪ್ಪು ಕೂಡ ಗರ್ಭಪಾತಕ್ಕೆ ಕಾರಣವಾಗಬಹುದು. ಏನನ್ನು ತಿನ್ನಬೇಕು ಮತ್ತು ಏನನ್ನು ತಿನ್ನಬಾರದು ಎಂಬುದರ ಬಗ್ಗೆ ವಿಶೇಷ ಎಚ್ಚರಿಕೆ ತೆಗೆದುಕೊಳ್ಳಬೇಕು.ಗರ್ಭಿಣಿಯರು ವಿಶೇಷವಾಗಿ ಪಪ್ಪಾಯ ಹಣ್ಣನ್ನು ತಿನ್ನಬಾರದೆಂದು ಹಿರಿಯರು ಸಲಹೆ ಕೊಡುತ್ತಾರೆ.ಅದೇ ರೀತಿ ದ್ರಾಕ್ಷಿಯ ಸಿಪ್ಪೆಯನ್ನು ಜೀರ್ಣಿಸಿಕೊಳ್ಳಲು ಸಮಸ್ಯೆಯಾಗುವುದರಿಂದ ಅದನ್ನು ಕೂಡ ಗರ್ಭಿಣಿಯರು ಸೇವನೆ ಮಾಡದೇ ಇರುವುದು ಉತ್ತಮ. ಅನಾನಸ್‌ ಹಣ್ಣನ್ನು ತಿಂದರೆ ಗರ್ಭಪಾತವಾಗುತ್ತದೆ ಎಂಬ […]

Advertisement

Wordpress Social Share Plugin powered by Ultimatelysocial