ಗೃಹ ಬಳಕೆಯ ಎಲ್‍ಜಿಪಿ ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡುವುದಿಲ್ಲ:

 

ನವದೆಹಲಿ,ಜೂ.3- ಗೃಹ ಬಳಕೆಯ ಎಲ್‍ಜಿಪಿ ಸಿಲಿಂಡರ್‍ಗಳಿಗೆ ಸಬ್ಸಿಡಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಿದೆ.
ಇದರಿಂದ ಸಾಮಾನ್ಯ ಗ್ರಾಹಕರು ಮಾರುಕಟ್ಟೆ ದರಕ್ಕೆ ಅಡುಗೆ ಅನಿಲವನ್ನು ಖರೀದಿಸಬೇಕಾಗುತ್ತದೆ. ಕೋವಿಡ್ ಶುರುವಾದ ದಿನದಿಂದ ಎಲ್‍ಪಿಜಿ ವಿನಿಯೋಗದಾರರಿಗೆ ಸಬ್ಸಿಡಿ ನೀಡಿಲ್ಲ.

ಇನ್ಮುಂದೆಯೂ ಕೂಡ ನೀಡಲು ಸಾಧ್ಯವಿಲ್ಲ ಎಂದು ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಸ್ಪಷ್ಟಪಡಿಸಿದ್ದಾರೆ.

ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಹೊಂದಿದವರಿಗೆ ಮಾತ್ರ ಈಗ ಸಬ್ಸಿಡಿ ನೀಡಲಾಗುತ್ತದೆ. ದೇಶದ ಎಲ್ಲ ಪ್ರಜೆಗಳಿಗೆ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಎಲ್‍ಪಿಜಿ ಸಿಲಿಂಡರ್ ಬೆಲೆ 1006 ರೂ. ಇದೆ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ 200 ರೂ. ಸಬ್ಸಿಡಿ ಸಿಗಲಿದೆ.

ಈ ಮೊದಲು ಸಬ್ಸಿಡಿ ಸಹಿತವಾಗಿಯೇ ಸಿಗುತಿತ್ತು. ಗೃಹ ಬಳಕೆಗೆ ನೀಡಲಾಗುತ್ತಿದ್ದ ಸಬ್ಸಿಡಿ ಸಿಲಿಂಡರ್ ದುರುಪಯೋಗ ಆಗುತ್ತಿರುವ ವಿಚಾರ ತಿಳಿದು ಮೋದಿ ಸರ್ಕಾರ ಸಿಲಿಂಡರ್ ಖರೀದಿ ಮಾಡಿದ ಬಳಿಕ ಬ್ಯಾಂಕ್ ಖಾತೆಗೆ ಸಬ್ಸಿಡಿ ದುಡ್ಡನ್ನು ಹಾಕುತ್ತಿತ್ತು. ಆದರೆ ಕೋವಿಡ್ ಬಳಿಕ ಸಬ್ಸಿಡಿ ಮೊತ್ತ ಹಾಕುವುದನ್ನು ಸ್ಥಗಿತಗೊಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿಧು ಹತ್ಯೆ ಬಗ್ಗೆ ಬದುಕುಳಿದ ಸ್ನೇಹಿತ ಹೇಳಿದ ಆ ಭಯಾನಕ ಮಾಹಿತಿ ಇಲ್ಲಿದೆ..!

Fri Jun 3 , 2022
  ಪಂಜಾಬ್: ಕಾಂಗ್ರೆಸ್ ನಾಯಕ, ಫೇಮಸ್ ಸಿಂಗರ್ ಸಿಧು ಮೂಸೆವಾಲಾ ಹತ್ಯೆ ಎಲ್ಲರನ್ನು ಭಯಗೊಳಿಸಿದೆ. ಈ ಹತ್ಯೆಯ ಹೊಣೆ ಹೊತ್ತಿದ್ದು ಜೈಲಿನಲ್ಲಿರುವಾತ. ಕೆನಡಾ ಗ್ಯಾಂಗ್ ಜೈಲಿನಲ್ಲಿದ್ದುಕೊಂಡೆ ಇಷ್ಟೆಲ್ಲಾ ಫ್ಲ್ಯಾನ್ ಮಾಡಿದ ಬಗ್ಗೆಯೂ ಪಂಜಾಬ್ ಜನರಲ್ಲಿ ಆತಂಕ ಉಂಟು ಮಾಡಿದೆ. ಜೊತೆಗೆ ಸಿಧು ಹತ್ಯೆಯ ಬೆನ್ನಲ್ಲೇ ಹೈಕೋರ್ಟ್ ಪಂಜಾಬ್ ಆಪ್ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡಿದ್ದು, ಭದ್ರತೆ ವಾಪಾಸ್ ತೆಗೆದುಕೊಂಡವರಿಗೆ ಮತ್ತೆ ಭದ್ರತೆ ನೀಡಲು ಸೂಚಿಸಿದೆ. ಈ ಬೆನ್ನಲ್ಲೆ ಸಿಧು ಹತ್ಯೆ ಹೇಗಾಯಿತು ಎಂಬ […]

Advertisement

Wordpress Social Share Plugin powered by Ultimatelysocial