ಬೆಂಗಳೂರು, ಏ.21- ಹುಬ್ಬಳ್ಳಿಯ ಗುಂಪು ಗಲಭೆಯ ಹಿಂದೆ ಬಿಜೆಪಿ ಕೈವಾಡವಿದ್ದು, ಮೊದಲು ಆ ಕುರಿತು ತನಿಖೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶೇ.40ರಷ್ಟು ಕಮಿಷನ್ ಲಂಚದ ಹಗರಣದಿಂದ ಉಂಟಾಗುತ್ತಿದ್ದ ಮಾನ ಹಾನಿಯನ್ನು ತಪ್ಪಿಸಿಕೊಳ್ಳಲು ವಿಷಾಂತರಿಸುವ ಸಲುವಾಗಿ ಬಿಜೆಪಿಯವರೇ ವಿವಾದಿತ ಸಾಮಾಜಿಕ ಫೋಸ್ಟ್ ಹಾಕಿದ್ದಾರೆ. ಅದರ ಬೆನ್ನಲ್ಲೆ ಗಲಭೆಯಾಗಿದೆ ಎಂದಿದ್ದಾರೆ.
ಗಲಭೆಯ ವೇಳೆ ಶಾಂತಿ ಕಾಪಾಡಲು ಕಾಂಗ್ರೆಸ್ನ ಎಲ್ಲಾ ನಾಯಕರು ಪ್ರಯತ್ನ ಪಟ್ಟಿದ್ದಾರೆ. ಕೆಲವು ಕಿಡಿಗೇಡಿಗಳು ಕಾನೂನು ಕೈಗೆ ತೆಗೆದುಕೊಳ್ಳಲು ಯತ್ನಿಸಿದಾಗ ಪೊಲೀಸರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಸೇರಿದಂತೆ ನಮ್ಮ ನಾಯಕರಿಗೆ ಮನವಿ ಮಾಡಿ ಪರಿಸ್ಥಿತಿ ತಿಳಿಗೊಳಿಸಲು ಕೇಳಿ ಕೊಂಡಿದ್ದಾರೆ. ಆ ಮನವಿಯ ಪ್ರಕಾರ ನಮ್ಮ ಮುಖಂಡರು ಸ್ಥಳಕ್ಕೆ ಹೋಗಿದ್ದು ಶಾಂತಿಯಿಂದಿರಲು ಜನರಲ್ಲಿ ಮನವಿ ಮಾಡಿದ್ದಾರೆ. ಆ ವೇಳೆ ಅಲ್ತಾಫ್ ಅವರಿಗೆ ಪೆಟ್ಟು ಬಿದಿದೆ. ನೋವು ಉಂಡರೂ ಶಾಂತಿ ಪಾಲನೆ ಶತ ಪ್ರಯತ್ನ ನಡೆಸಿದ್ದಾರೆ ಎಂದು ಹೇಳಿದರು.
ಟ್ವೀಟ್ ಮಾಡಿ ಗಲಭೆಗೆ ಕಾರಣವಾದ ಬಿಜೆಪಿಯವರ ಬಗ್ಗೆ ಮೊದಲು ತನಿಖೆಯಾಗಬೇಕು, ಅದನ್ನು ಬಿಟ್ಟು ಗಲಭೆಗೆ ಕಾಂಗ್ರೆಸ್ ಕಾರಣ ಎಂದು ಸುಳ್ಳು ಪ್ರಚಾರ ನಡೆಸಲಾಗುತ್ತಿದೆ. ಶೇ.40ರಷ್ಟು ಕಮಿಷನ್ ಹಗರಣದಿಂದ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada