ಬೆಂಗಳೂರು: ಹುಬ್ಬಳ್ಳಿ ಗಲಭೆಯಲ್ಲಿ BJP, PFI ಷಡ್ಯಂತ್ರವಿದೆ. ಸಮಾಜದ ಶಾಂತಿ ಕೆಡಿಸುತ್ತಿರುವ VHP, ಭಜರಂಗದಳ, SDPIನಂಥ ಯಾವುದೇ ಸಂಘಟನೆಗಳನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ. ಹುಬ್ಬಳ್ಳಿಯಲ್ಲಿ ಯಾರೇ ಆಹಾರ ಕಿಟ್ ವಿತರಿಸಿದ್ದರೂ ಅದು ಅವರ ವೈಯಕ್ತಿಕ ವಿಚಾರ.
ಅದಕ್ಕೂ ಕಾಂಗ್ರೆಸ್ಗೂ ಸಂಬಂಧವಿಲ್ಲ.ಕಾಂಗ್ರೆಸ್ ಪಕ್ಷ ಸಂವಿಧಾನ, ಕಾನೂನಿಗೆ ಬದ್ಧವಾಗಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಹುಬ್ಬಳ್ಳಿ ಗಲಭೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಗಲಭೆ ಸಂಬಂಧ ಅನೇಕರನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ನಡೆಸುತ್ತಿರುವಂತ ಪೊಲೀಸರು, ಗಲಭೆ ಕಿಂಗ್ ಪಿನ್ ವಸೀಂ ಅನ್ನು ಬಂಧಿಸಿದ್ದಾರೆ. ತನಿಖೆ ಮುಂದುವರೆದಿರೋ ಸಂದರ್ಭದಲ್ಲಿಯೇ, ಈ ಗಲಭೆಯಲ್ಲಿ ಬಿಜೆಪಿ, ಪಿಎಫ್ಐ ಷಡ್ಯಂತ್ರವಿದೆ ಎನ್ನುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ಹುಬ್ಬಳ್ಳಿ ಗಲಭೆಯಲ್ಲಿ BJP, PFI ಷಡ್ಯಂತ್ರವಿದೆ. ಸಮಾಜದ ಶಾಂತಿ ಕೆಡಿಸುತ್ತಿರುವ VHP, ಭಜರಂಗದಳ, SDPIನಂಥ ಯಾವುದೇ ಸಂಘಟನೆಗಳನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ. ಹುಬ್ಬಳ್ಳಿಯಲ್ಲಿ ಯಾರೇ ಆಹಾರ ಕಿಟ್ ವಿತರಿಸಿದ್ದರೂ ಅದು ಅವರ ವೈಯಕ್ತಿಕ ವಿಚಾರ. ಅದಕ್ಕೂ ಕಾಂಗ್ರೆಸ್ಗೂ ಸಂಬಂಧವಿಲ್ಲ.ಕಾಂಗ್ರೆಸ್ ಪಕ್ಷ ಸಂವಿಧಾನ, ಕಾನೂನಿಗೆ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: