‘ಅಡುಗೆ ರೆಡಿ ಮಾಡಿದ್ದು ನಾನು, ಬೇರೆಯವರು ಬರೇ ತಿನ್ನುವುದಕ್ಕಾ?’

 

ಬೆಂಗಳೂರು: ವಿಧಾನ ಪರಿಷತ್‍ಗೆ ಚುನಾವಣೆಗೆ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸುವಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಯಶಸ್ವಿಯಾಗಿದ್ದರೆ, ಕೆಪಿಸಿಸಿ ಅಧ‍್ಯಕ್ಷ ಡಿ.ಕೆ.ಶಿವಕುಮಾರ್ ಮತ್ತೆ ಅಸಹಾಯಕರಾಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

‘ಒಂದು ವಾರದಲ್ಲಿ ಎರಡು ಬಾರಿ ದೆಹಲಿ ದಂಡಯಾತ್ರೆ, ಚಿಂತನ ಶಿಬಿರದಲ್ಲಿ ಒಗ್ಗಟ್ಟಿನ ಮಂತ್ರ ಜಪ. ಇಷ್ಟೆಲ್ಲಾ ಆದರೂ ಡಿಕೆಶಿಹಿರಿಯ ನಾಯಕ ಎಸ್‌ಆರ್‌ಪಿ ಅವರಿಗೆ ಟಿಕೆಟ್‌ ಕೊಡಿಸಲು ಸಾಧ್ಯವಾಗಿಲ್ಲ. ಸಿದ್ದರಾಮಯ್ಯ ಅವರ ಹಠವೇ ಅಂತಿಮವಾಯಿತು. ಡಿಕೆಶಿ ಅವರೇ ನೀವು ನಾಮಕಾವಸ್ಥೆ ಅಧ್ಯಕ್ಷರೇ?’ ಎಂದು ಬಿಜೆಪಿ ಪ್ರಶ್ನಿಸಿದೆ.

ಒಂದು ವಾರದಲ್ಲಿ ಎರಡು ಬಾರಿ ದೆಹಲಿ ದಂಡಯಾತ್ರೆ, ಚಿಂತನ ಶಿಬಿರದಲ್ಲಿ ಒಗ್ಗಟ್ಟಿನ ಮಂತ್ರ ಜಪ.

ಇಷ್ಟೆಲ್ಲಾ ಆದರೂ  ಅವರಿಗೆ ಹಿರಿಯ ನಾಯಕ ಎಸ್‌ಆರ್‌ಪಿ ಅವರಿಗೆ ಟಿಕೆಟ್‌ ಕೊಡಿಸಲು ಸಾಧ್ಯವಾಗಿಲ್ಲ.

ಸಿದ್ದರಾಮಯ್ಯ ಅವರ ಹಠವೇ ಅಂತಿಮವಾಯಿತು. ಡಿಕೆಶಿ ಅವರೇ, ನೀವು ನಾಮಕಾವಸ್ಥೆ ಅಧ್ಯಕ್ಷರೇ?#ಅಸಹಾಯಕಡಿಕೆಶಿ

‘ತಮ್ಮ ಪರಮಾಪ್ತ ಎಂ.ಬಿ.ಪಾಟೀಲರನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಡುವಲ್ಲಿ ಸಿದ್ದರಾಮಯ್ಯ ಯಶಸ್ಸು ಕಂಡಿದ್ದಾರೆ. ಅದೇ ಎಂ.ಬಿ.ಪಾಟೀಲರು ಕೆಪಿಸಿಸಿ ಅಧ್ಯಕ್ಷರನ್ನೇ ಸಾರ್ವಜನಿಕ ವಲಯದಲ್ಲಿ, ಮಾಧ್ಯಮದವರ ಮುಂದೆ ಪ್ರಶ್ನಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇವಲ ಅಲಂಕಾರಿಕವೇ!?’ ಎಂದು ಟೀಕಿಸಿದೆ.

ತಮ್ಮ ಪರಮಾಪ್ತ ಎಂಬಿ ಪಾಟೀಲರನ್ನು, ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಡುವಲ್ಲಿ ಸಿದ್ದರಾಮಯ್ಯ ಯಶಸ್ಸು ಕಂಡಿದ್ದಾರೆ.

ಅದೇ ಎಂಬಿ ಪಾಟೀಲರು ಕೆಪಿಸಿಸಿ ಅಧ್ಯಕ್ಷರನ್ನೇ ಸಾರ್ವಜನಿಕ ವಲಯದಲ್ಲಿ, ಮಾಧ್ಯಮದವರ ಮುಂದೆ ಪ್ರಶ್ನಿಸಿದ್ದರು.’ಅಡುಗೆ ನಾನು ರೆಡಿ ಮಾಡಿದ್ದು, ಬೇರೆಯವರು ಬರೇ ತಿನ್ನುವುದಕ್ಕಾ? ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಡಿಕೆಶಿ ಅವರೇ ನೀವು ಬರೇ ಇಂತಹ ಮಾತಿನ ಬಾಣ ಎಸೆಯಬೇಕಷ್ಟೇ. ಸಿದ್ದರಾಮಯ್ಯ ನೀವು ಶ್ರಮ ವಹಿಸಿ ಮಾಡಿದ ಅಡುಗೆ ತಿಂದು ಮುಗಿಸುವುದು ಶತಸಿದ್ಧ’ ಎಂದು ಕುಟುಕಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಠ್ಯದಲ್ಲಿ ಒಳ್ಳೆಯದನ್ನೇ ಅಳವಡಿಸಲಾಗಿದೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

Wed May 25 , 2022
ಮೈಸೂರು, ಮೇ 25- ನಮ್ಮದು ಏಕ ಸಂಸ್ಕøತಿ ಅಲ್ಲ, ಎಲ್ಲರನ್ನೊಳಗೊಂಡ ಬಹು ಸಂಸ್ಕøತಿ. ಒಳ್ಳೆಯದನ್ನು ಪಡೆದು ಪಠ್ಯದಲ್ಲಿ ಅಳವಡಿಕೆ ಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ ಅವರು, ದೇವನೂರು ಮಹಾದೇವ ಅವರು ಹಿರಿಯ ಸಾಹಿತಿಗಳು. ಅವರು ಹೇಳುವುದರಲ್ಲೂ ಸತ್ಯವಿದೆ. ನಾವು ಅಳವಡಿಕೆ ಮಾಡಿರುವುದರಲ್ಲೂ ಸತ್ಯವಿದೆ. ನಾನು ಅವರನ್ನು ಶೀಘ್ರದಲ್ಲೇ ಭೇಟಿಯಾಗಿ ಪಠ್ಯಪುಸ್ತಕ ಪರಿಷ್ಕರಣೆ ಗೊಂದಲವನ್ನು ನಿವಾರಿಸಲಾಗುವುದು ಎಂದರು. ಪಠ್ಯಪರಿಷ್ಕರಣೆಗೆ ಹಿರಿಯ ಸಾಹಿತಿ ದೇವನೂರು ಮಹದೇವ ಆಕ್ಷೇಪ […]

Advertisement

Wordpress Social Share Plugin powered by Ultimatelysocial